Saturday, June 27, 2026
Homeಕರಾವಳಿಬೆಳ್ತಂಗಡಿ: ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿದ ಯುವತಿ: ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ತಪ್ಪೊಪ್ಪಿಗೆ ಕಾಣಿಕೆ

ಬೆಳ್ತಂಗಡಿ: ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿದ ಯುವತಿ: ಧರ್ಮಸ್ಥಳ ಮಂಜುನಾಥ ಸ್ವಾಮಿಗೆ ತಪ್ಪೊಪ್ಪಿಗೆ ಕಾಣಿಕೆ

- Advertisement -
- Advertisement -

ಬೆಳ್ತಂಗಡಿ: ಕಾಂತಾರ ಚಿತ್ರದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಇನ್ ಸ್ಟ್ರಾ ಗ್ರಾಂನಲ್ಲಿ ಹಾಕಿದ್ದ ಯುವತಿ ತನ್ನ ತಪ್ಪಿನ ಅರಿವಾಗಿ ಇದೀಗ ಧರ್ಮಸ್ಥಳ ಕ್ಷೇತ್ರದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ.

ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ಎಸ್.ರೆಡ್ಡಿ ಕಾಂತಾರ ಚಿತ್ರದಲ್ಲಿರುವಂತೆ ವೇಷ ಹಾಕಿ ಪೇಜ್ ನಲ್ಲಿ ಹಂಚಿಕೊಂಡಿದ್ದಳು. ತುಳುನಾಡಿನ ನಂಬಿಕೆಯ ದೈವ ಪಂಜುರ್ಲಿಯ ರೀಲ್ಸ್ ವೈರಲ್ ಆಗುತ್ತಿದ್ದಂತೆ ಇದರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತವಾಗಿತ್ತು .

ಇದೀಗ ಆಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ದೇವಸ್ಥಾನದಲ್ಲಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ. ಡಾ ಡಿ ವೀರೇಂದ್ರ ಹೆಗ್ಗಟೆಯವರನ್ನು ಭೇಟಿಯಾಗಿ ಕ್ಷಮೆ ಕೇಳಿದ್ದಾಳೆ.

- Advertisement -

Latest News

error: Content is protected !!