Friday, April 19, 2024
HomeUncategorizedಕೈ-ಕಮಲಾ ಕಾರ್ಯಕರ್ತರ ನಡುವೆ ಹೊಡೆದಾಟ; ಅರ್.ಟಿ.ಐ .ಕಾರ್ಯಕರ್ತ ಪದ್ಮನಾಭ ಮಯ್ಯ ಮೇಲೆ ಹಲ್ಲೆ!!

ಕೈ-ಕಮಲಾ ಕಾರ್ಯಕರ್ತರ ನಡುವೆ ಹೊಡೆದಾಟ; ಅರ್.ಟಿ.ಐ .ಕಾರ್ಯಕರ್ತ ಪದ್ಮನಾಭ ಮಯ್ಯ ಮೇಲೆ ಹಲ್ಲೆ!!

spot_img
- Advertisement -
- Advertisement -

ಪುಂಜಾಲಕಟ್ಟೆ: ಬೇರೆ ಬೇರೆ ಉದ್ದೇಶವನ್ನೊಳಗೊಂಡು ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದಿದೆ.

ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಂಘದ ಆವರಣದಲ್ಲಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು.

ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಕ್ಕದಲ್ಲಿರುವ ಕಾವಳಮೂಡೂರು ಗ್ರಾ.ಪಂ. ಮುಂಭಾಗದಲ್ಲಿ ಗ್ರಾ.ಪಂ.ನಿಂದ ನೀರು ಹಾಗೂ ಮನೆ ತೆರಿಗೆ ಯನ್ನು ಏಕಾಏಕಿ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ಗೆ ಮುಂದಾಗಿದ್ದರು.


ಈ ಹಂತದಲಲ್ಲಿ ಅರ್.ಟಿ.ಐ .ಕಾರ್ಯಕರ್ತ ಪದ್ಮನಾಭ ಮಯ್ಯ ಪ್ರತಿಭಟನೆ ಯಲ್ಲಿ ಕಾಣಿಸಿಕೊಂಡಿದ್ದು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಆಕ್ಷೇಪಿಸಿದರು.

ಈ ಸಂದರ್ಭದಲ್ಲಿ ಉಭಯ ಪಕ್ಷದ ಕಾರ್ಯಕರ್ತರ ನಡುವೆ ನೂಕಾಟ, ಪರಸ್ಪರ ತಳ್ಳಾಟ ನಡೆಯಿತು.
ಇದೇ ವೇಳೆ ಆರ್.ಟಿ.ಐ.ಕಾರ್ಯಕರ್ತ ಪದ್ಮನಾಭ ಮಯ್ಯ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ರೂಪ ಬದಲಾಯಿತು.


ಉಭಯ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು. ಪುಂಜಾಲಕಟ್ಟೆ ಎಸ್.ಐ.ಸೌಮ್ಯಾ ಅವರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು,ಉಭಯ ಪಕ್ಷದ ನಾಯಕ ರ ನಡುವೆ ಆರೋಪ ಹಾಗೂ ಪ್ರತ್ಯಾರೋಪಗಳು ನಡೆದಿವೆ.

ಈ ಸಂದರ್ಭದಲ್ಲಿ ಸ್ಥಳದಲ್ಲಿ ಜಮಾಯಿಸಿದ್ದ ಕಾರ್ಯಕರ್ತರ ನ್ನು ಪೊಲೀಸರು ಲಾಠಿ ಬೀಸಿ ಚದುರಿಸಿದರು.ಆರ್.ಟಿ.ಐ ಕಾರ್ಯಕರ್ತ ಪದ್ಮನಾಭ ಮಯ್ಯ ಅವರು ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದರೆ, ಕಾಂಗ್ರೆಸ್ ಕಾರ್ಯ ಕರ್ತರಾದ ಸದಾನಂದ ಶೆಟ್ಟಿ, ಬಿ.ಆರ್.ಅಂಚನ್ ಅವರು ಬಂಟ್ವಾಳ ಸರಕಾರಿ ಆಸ್ಪತ್ರೆಯ ಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ.


ಪುಂಜಾಲಕಟ್ಟೆ ಪೋಲೀಸರು ಆಸ್ಪತ್ರೆಯಲ್ಲಿ ದಾಖಲಾದವರ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.ಸುದ್ದಿ ತಿಳಿದು ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಸ್ಥಳಕ್ಕಾಗಮಿಸಿ ಕಾವಳಮೂಡೂರು ಸೊಸೈಟಿ ಆಧ್ಯಕ್ಷ ಪದ್ಮಶೇಖರ್ ಜೈನ್ , ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ ಬಜ ಅವರಿಂದ ಮಾಹಿತಿ ಪಡೆದುಕೊಂಡರು

- Advertisement -
spot_img

Latest News

error: Content is protected !!