- Advertisement -
- Advertisement -
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ.
ಮಾಜಿ ಎಂಎಲ್ಸಿ ದಾವಣಗೆರೆ ಜಿಲ್ಲೆಯ ಕೆ. ಅಬ್ದುಲ್ ಜಬ್ಬಾರ್ ಮತ್ತು ಬಿಎಂಟಿಸಿ ಸಂಸ್ಥೆಯ ಮಾಜಿ ಅಧ್ಯಕ್ಷ ಬೆಂಗಳೂರಿನ ಎಂ. ನಾಗರಾಜು ಯಾದವ್ ಅವರಿಗೆ ಟಿಕೆಟ್ ನೀಡಲಾಗಿದೆ.
ಅಲ್ಪಸಂಖ್ಯಾತ ಮತ್ತು ಗೊಲ್ಲ ಸಮುದಾಯದ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಮಣೆ ಹಾಕಿದೆ.
ನಾಳೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಅಭ್ಯರ್ಥಿ ಆಯ್ಕೆ ಪಟ್ಟಿಯನ್ನು ಇಂದು ಎಐಸಿಸಿ ಪ್ರಕಟಿಸಿದೆ.
- Advertisement -