- Advertisement -
- Advertisement -
ಬೆಂಗಳೂರು ; ಕಾಂಗ್ರೆಸ್ ನಲ್ಲಿ ನಾಲ್ಕು ಜನ ಸಿಎಂ ರೇಸ್ ನಲ್ಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಈಗ ನಾಲ್ವರು ಸಿಎಂ ರೇಸ್ ನಲ್ಲಿದ್ದಾರೆ.
ಮೊದಲು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಈಗ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಂ.ಬಿ.ಪಾಟೀಲ್ ಅವರು ಸಿಎಂ ರೇಸ್ ನಲ್ಲಿದ್ದಾರೆ ಎಂದು ಹೇಳಿದ್ದಾರೆ.
ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಪಟ್ಟಿ ಬಿಡುಗಡೆ ವಿಳಂಬ ಚುನಾವಣಾ ಕಾರ್ಯತಂತ್ರದ ಭಾಗವಾಗಿದೆ. ಪಟ್ಟಿ ಬಿಡುಗಡೆ ಸಂಬಂದ ದೆಹಲಿಯಲ್ಲಿ ಚರ್ಚೆ ನಡೆಯುತ್ತಿದ್ದು, ಶೀಘ್ರವೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದ್ದಾರೆ.
- Advertisement -