Friday, June 27, 2025
Homeಕರಾವಳಿಮಂಗಳೂರುವಿಧಾನ ಪರಿಷತ್ ದಕ್ಷಿಣ ‌ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ‌ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿ ಸಮಿತಿ ನೇಮಕ

ವಿಧಾನ ಪರಿಷತ್ ದಕ್ಷಿಣ ‌ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ‌ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಉಸ್ತುವಾರಿ ಸಮಿತಿ ನೇಮಕ

spot_img
- Advertisement -
- Advertisement -

ಮಂಗಳೂರು: ತೆರವಾಗಿರುವ ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಶೀಘ್ರದಲ್ಲೇ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ದಕ್ಷಿಣ ಕನ್ನಡ- ಉಡುಪಿ ಸ್ಥಳೀಯ ಸಂಸ್ಥೆ ಉಪಚುನಾವಣೆ ಉಸ್ತುವಾರಿ ಸಮಿತಿ ರಚಿಸಲಾಗಿದೆ.‌

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉಸ್ತುವಾರಿ ಸಮಿತಿ ಅಧ್ಯಕ್ಷರಾಗಿದ್ದು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಸಚಿವ ರಮಾನಾಥ ರೈ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಪದ್ಮರಾಜ್, ಮಾಜಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾರ್ಕಳ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಉದಯ ಶೆಟ್ಟಿ ಮತ್ತು ಕಿಶನ್ ಶೆಟ್ಟಿ ಸದಸ್ಯರಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಸಂಭಾವ್ಯ ಅಭ್ಯರ್ಥಿ ಹೆಸರು ಕೆಪಿಸಿಸಿಗೆ ಶಿಫಾರಸು, ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲುವಿಗೆ ಕ್ರಮದ ಬಗ್ಗೆ ಸ್ಥಳೀಯ ಶಾಸಕರು ಮತ್ತು ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಕೂಡಲೇ ಕೆಪಿಸಿಸಿಗೆ ವರದಿ ಸಲ್ಲಿಸುವಂತೆ ಉಸ್ತುವಾರಿ ಸಮಿತಿಗೆ ಸೂಚಿಸಲಾಗಿದೆ.

ಚನ್ನಪಟ್ಟಣ, ಶಿಗ್ಗಾಂವ್ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ದಕ್ಷಿಣ ಕನ್ನಡ-ಉಡುಪಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಉಸ್ತುವಾರಿ ಸಮಿತಿಗಳನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!