- Advertisement -
- Advertisement -
ಬೆಳ್ತಂಗಡಿ; ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಪಕ್ಷಾಂತರ ಪರ್ವ ಜೋರಾಗಿದೆ. ಹಲವು ದೊಡ್ಡ ದೊಡ್ಡ ನಾಯಕರೇ ಆ ಪಕ್ಷ ಈ ಪಕ್ಷ ಅಂತಾ ಪಕ್ಷಾಂತರಿಗಳಾಗುತ್ತಿದ್ದಾರೆ. ಹೀಗಿರುವಾಗ ಬೆಳ್ತಂಗಡಿ ತಾಲೂಕಿನಲ್ಲಿ ಕಾಂಗ್ರೆಸ್ ನ ಸಾಕಷ್ಟು ಹಿರಿಯ ನಾಯಕರು ಬಿಜೆಪಿ ಸೇರಲಿದ್ದಾರೆ. ಕಾಂಗ್ರೆಸ್ ನ ಕಾರ್ಯವೈಖರಿಯಿಂದ ಬೇಸತ್ತು ಅವರೆಲ್ಲಾ ಕಮಲ ಪಡೆ ಸೇರಲು ಸನ್ನದ್ಧರಾಗಿದ್ದಾರೆ.
ಅಭಿವೃದ್ಧಿಯ ಹರಿಕಾರ ಎಂದೇ ಖ್ಯಾತಿ ಗಳಿಸಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮೆಚ್ಚಿ ಅವರೆಲ್ಲಾ ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಅವರ ಸೇರ್ಪಡೆಯಿಂದ ಪಕ್ಷಕ್ಕೆ ಇನ್ನಷ್ಟು ಬಲ ಬರಲಿದೆ.
- Advertisement -