ಕಾಪು: ರಾಜ್ಯ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆಯ ಸಚಿವರಾದ ಶೋಭಾ ಕರಂದ್ಲಾಜೆ ಅವರು ಕಾಂಗ್ರೆಸ್ ಪಕ್ಷವು ತನ್ನ ನಿಷ್ಠಾವಂತ ಮತಬ್ಯಾಂಕ್ ಅನ್ನು ಭದ್ರಪಡಿಸಿಕೊಳ್ಳುವ ಸಲುವಾಗಿ ಮತಾಂತರ ವಿರೋಧಿ ಮಸೂದೆಯನ್ನು ವಿರೋಧಿಸುತ್ತಿದೆ ಎಂದು ಆರೋಪಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ , ದೇಶ ಮತ್ತು ಸಮಾಜವು ತೊಂದರೆಗೊಳಗಾಗಬಹುದಾದ ಕೆಟ್ಟ ಪರಿಣಾಮಗಳನ್ನು ಲೆಕ್ಕಿಸದೆ ಕಾಂಗ್ರೆಸ್ ಅಧಿಕಾರಕ್ಕೆ ಏರುವುದರ ಮೇಲೆ ಮಾತ್ರ ಗಮನಹರಿಸುತ್ತಿದೆ ಎಂದು ಆರೋಪಿಸಿದರು.
“ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಮರಳಲು ಯಾವುದೇ ಬೆಲೆ ತೆತ್ತಾದರೂ ತನ್ನ ಮತ ಬ್ಯಾಂಕ್ ಅನ್ನು ಉಳಿಸಿಕೊಳ್ಳುವ ಹಠಮಾರಿ ಮನಸ್ಥಿತಿಯನ್ನು ಹೊಂದಿದ್ದಾರೆ. ಕಾಂಗ್ರೆಸ್ ಈ ಕಾಯ್ದೆಯ ಬಗ್ಗೆ ಚರ್ಚೆಯಲ್ಲಿ ಭಾಗವಹಿಸುತ್ತದೆ ಮತ್ತು ಅದನ್ನು ಸುಧಾರಿಸಲು ಸಲಹೆಗಳನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಅದು ಕುರುಡಾಗಿದೆ. ಮಸೂದೆಯನ್ನು ವಿರೋಧಿಸಸಿದೆ ಮತ್ತು ಇದು ಸಮಾಜಕ್ಕೆ ಮಾಡಿದ ದ್ರೋಹವಾಗಿದೆ.
ಕಾಪು ಪಟ್ಟಣದ ಪುರಸಭೆಗೆ ಮುಂಬರುವ ಚುನಾವಣೆ ನಿಮಿತ್ತ ಶೋಭಾ ಅವರು ಕಾಪು ನಗರದ ವಿವಿಧ ಪ್ರದೇಶಗಳಿಗೆ ಬುಧವಾರ ಭೇಟಿ ನೀಡಿ ಬಿಜೆಪಿ ಪರವಾಗಿ ಮತಯಾಚನೆ ಮಾಡಿದರು.


