ಬೆಳ್ತಂಗಡಿ : ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏ.20 ರಂದು ಬೆಳಗ್ಗೆ 10:30 ಗಂಟೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ನೇತ್ರತ್ವದಲ್ಲಿ ನಡೆಯುವ ” ಸರಕಾರದ ನಡೆ ಕಾರ್ಯಕರ್ತರ ಕಡೆ “ಕಾಂಗ್ರೆಸ್ ಕಾರ್ಯಕತರ ಸಭೆಗೆ ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿಗಳು, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಮಾನ್ಯ ಡಿ.ಕೆ.ಶಿವಕುಮಾರ್, ಉಸ್ತುವಾರಿ ಸಚಿವರಾ ದಿನೇಶ್ ಗುಂಡೂರಾವ್,ಕೃಷಿ ಸಚಿವರಾದ ಚೆಲುವರಾಯಸ್ವಾಮಿ, ಅಶೋಕ್ ರೈ, ಮಂಜುನಾಥ ಭಂಡಾರಿ, ಐವನ್ ಡಿಸೋಜ,ಹರೀಶ್ ಕುಮಾರ್,ರಮಾನಾಥ ರೈ, ವಿನಯ ಕುಮಾರ್ ಸೊರಕೆ,ಅಭಯಚಂದ್ರ ಜೈನ್, ದಿಕ್ಸೂಚಿ ಬಾಷಣಗಾರರಾಗಿ ನಿಕೇತ್ ರಾಜ್ ಮೌರ್ಯ, ಹಾಗೂ ಪಕ್ಷದ ಇನ್ನಿತರ ಅನೇಕ ಮುಖಂಡರುಗಳು ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಮುಖಂಡರುಗಳು, ಕಾರ್ಯಕರ್ತರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಬೇಕೆಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಅಧ್ಯಕ್ಷರಾದ ಅಬ್ದುಲ್ ಕರೀಮ್ ಗೇರುಕಟ್ಟೆ ಕರೆ ನೀಡಿದ್ದಾರೆ.