Saturday, June 28, 2025
Homeಕರಾವಳಿಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ; ಸಮಸ್ಯೆಗಳ ಬಗ್ಗೆ ಸಂವಾದ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ; ಸಮಸ್ಯೆಗಳ ಬಗ್ಗೆ ಸಂವಾದ

spot_img
- Advertisement -
- Advertisement -

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆಯು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಬೆಳ್ತಂಗಡಿ ಕಾಂಗ್ರೆಸ್ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಪರಿಶಿಷ್ಟ ಪಂಗಡದಿಂದ ಸರ್ಕಾರ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿರುವ ಸದಸ್ಯರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ, ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಒಳಗೆ ವಾಸಿಸುತ್ತಿರುವ ಬುಡಕಟ್ಟು ಕುಟುಂಬದ ಹಲವಾರು ಸಮಸ್ಯೆಗಳ ಬಗ್ಗೆ ವಿದ್ಯುತ್‌, ರಸ್ತೆ, ಭೂ ಒಡೆತನದ, ಬಗ್ಗೆ ಸಂವಾದ ವನ್ನು ನಡೆಸಿದರು.

ಬೆಳ್ತಂಗಡಿಯಲ್ಲಿ ಮುಂದಿನ ದಿನಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾವೇಶವನ್ನು ನಡೆಸಿ, ಸಭೆಯಲ್ಲಿ ಚರ್ಚಿಸಿದಂತಹ ಎಲ್ಲಾ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಸಂಬಂಧಪಟ್ಟಂತೆ ಮಂತ್ರಿಗಳನ್ನು ಕರೆಸಿ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದರು.

ಇದೇ ವೇಳೆಯಲ್ಲಿ ಆದಿವಾಸಿ ಸಮುದಾಯದವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸವಣಾಲು ಗ್ರಾಮದ ಹನ್ಯಾಡಿ ಪಿಲಿಕಲ ರಸ್ತೆ ದುರಸ್ತಿ ವೀಕ್ಷಣೆ ಸಂದರ್ಭದಲ್ಲಿ ಶಾಸಕರನ್ನು ಪ್ರಶ್ನೆ ಮಾಡಿದಕ್ಕೆ, ‘ನಾಯಿದ ಬಾಲೆಲು’ ಎಂಬ ನಿಂದನಾತ್ಮಕ ಪದ ಬಳಸಿದಕ್ಕೆ ಖಂಡಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ನಾರಾಯಣ ನಾಯ್ಕ್, ಜಿಲ್ಲಾ ಸಂಯೋಜಕರಾದ ಚಿತ್ತರಂಜನ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ ಎಮ್ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಜಿಲ್ಲಾ ಅರೋಗ್ಯ ರಕ್ಷಾ; ಸಮಿತಿಯ ಸದಸ್ಯರಾದ ಜಯರಾಮ್ ಎಮ್ ಕೆ, ಬೆಳ್ತಂಗಡಿ ನಗರ ಸಮಿತಿ ಅಧ್ಯಕ್ಷರಾದ ಜಯನಂದ ಪಿ, ಗ್ರಾಮೀಣ ಅಧ್ಯಕ್ಷರಾದ ಜಿನ್ನಪ್ಪ ನಾಯ್ಕ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೇಖರ್ ಕುಕ್ಕೆಡಿ, ತಾಲೂಕು ಅರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಶ್ರೀಮತಿ ಸವಿತಾ, ತಾಲೂಕು ಆರಾಧನಾ ಸಮಿತಿಯ ಸದಸ್ಯರಾದ ಲಕ್ಷಣ್ ಮಲೆಕುಡಿಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಕೇಶವ ನಾಯ್ಕ್ ಒಡಿಲ್ನಾಳ ಹಾಗೂ ಸಮಿತಿ ಪ್ರಮುಖರು ಸದಸ್ಯರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!