- Advertisement -
- Advertisement -
ಮಂಗಳೂರು: ಕೋವಿಡ್ ಮೊದಲ ಅಲೆ, ಎರಡನೇ ಅಲೆ ಬಂದಾಗಲೂ ಕಾಂಗ್ರೆಸ್ ನವರು ಏನನ್ನೂ ಮಾಡಿಲ್ಲ, ಟೀಕೆಯಷ್ಟೇ ಮಾಡಿದ್ದು, ಜನರನ್ನು ದಾರಿ ತಪ್ಪಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಮುಖಂಡರು ರಾಜಕಾರಣ ಮಾಡುತ್ತಿದ್ದಾರೆ. ನಿಮ್ಮದೇ ಸರ್ಕಾರ ಮತ್ತು ನಿಮ್ಮದೇ ಮುಖ್ಯಮಂತ್ರಿ ಇದ್ದಾಗ ನೀವು ಮೇಕೆದಾಟು ಬಗ್ಗೆ ಚರ್ಚೆ ಮಾಡಲಿಲ್ಲ, ತಯಾರಿ ಮಾಡಲಿಲ್ಲವೇ? ಇವತ್ತು ನಮ್ಮ ಸರ್ಕಾರ ಸಂಪೂರ್ಣ ಬದ್ದತೆ ಹೊಂದಿದೆ. ನಾವು ಮೇಕೆದಾಟು ಯೋಜನರ ಮಾಡಿಯೇ ಸಿದ್ದ ಎಂದು ಪ್ರತಿಕ್ರಿಯಿಸಿದ್ದಾರೆ.
ಪಾದಯಾತ್ರೆ ಮೂಲಕ ಕಾಂಗ್ರೆಸ್ ಕೊರೊನಾವನ್ನು ವಿಸ್ತಾರ ಮಾಡಲು ನೋಡ್ತಿದಾರೆ. ಕೊರೋನಾ ಹೆಚ್ಚಳವಾದರೆ ಕಾಂಗ್ರೆಸ್ ಹೊಣೆಯಾಗುತ್ತದೆ ಎಂದರು.
- Advertisement -