Saturday, June 28, 2025
Homeತಾಜಾ ಸುದ್ದಿಪೂಜೆ ಸಲ್ಲಿಸಿ ವಾಪಾಸಾಗುತ್ತಿದ್ದ ಒಂದೇ ಕುಟುಂಬದ ನಾಲ್ವರಿಂದ ವಿಷ ಸೇವನೆ; ಓರ್ವ ಮೃತ್ಯು

ಪೂಜೆ ಸಲ್ಲಿಸಿ ವಾಪಾಸಾಗುತ್ತಿದ್ದ ಒಂದೇ ಕುಟುಂಬದ ನಾಲ್ವರಿಂದ ವಿಷ ಸೇವನೆ; ಓರ್ವ ಮೃತ್ಯು

spot_img
- Advertisement -
- Advertisement -

ಕೊಳ್ಳೇಗಾಲ: ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ಮಹದೇಶ್ವರ ಬೆಟ್ಟಕ್ಕೆ ಪೂಜೆ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ, ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಮಹದೇವ್ ನಾಯ್ಕ(50) ಮೃತಪಟ್ಟಿ ಪಟ್ಟಿದ್ದು, ಮೃತನ ಪತ್ನಿ ಗೌರಮ್ಮ (48) ಪುತ್ರಿ ಲೀಲವತಿ (40) ಮೊಮ್ಮಗಳು ರಿಷಿತ (17) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೈಸೂರು ಜಿಲ್ಲೆಯ ಕೆಆರ್ ನಗರ ತಾಲೂಕಿನ ಚಂದಗಾಲು ಗ್ರಾಮದ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿದ್ದಾರೆ. ಇವರು ಮಹದೇಶ್ವರ ಬೆಟ್ಟಕ್ಕೆ ಪೂಜೆ ಸಲ್ಲಿಸಿ ಕಾಲ್ನಡಿಗೆಯಲ್ಲಿ ವಾಪಾಸು ಬರುತ್ತಿದ್ದರು ಎನ್ನಲಾಗಿದೆ. ಘಟನೆಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಮಹದೇಶ್ವರ ಬೆಟ್ಟ ಠಾಣೆಯ ಪೊಲೀಸರು ವಿಷ ಸೇವನೆ ಮಾಡಿದ್ದ ಕುಟುಂಬವನ್ನು ಆಸ್ಪತ್ರೆಗೆ ಸಾಗಿಸಿ ಹೆಚ್ಚಿನ ಮಾಹಿತಿ ಪಡೆದು ಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆ ತಿಳಿಯುತ್ತಿದ್ದಂತೆ ಹನೂರು ತಾಲೂಕು ತಹಸೀಲ್ದಾರ್ ಗುರು ಪ್ರಸಾದ್ ,ಡಿ ವೈ ಎಸ್ ಪಿ ದರ್ಮೆಂದ್ರ ಆಸ್ಪತ್ರೆಗೆ ಆಗಮಿಸಿ ಚಿಕಿತ್ಸೆ ಪಡೆಯುತ್ತಿದ್ದವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!