Sunday, April 28, 2024
Homeಚಿಕ್ಕಮಗಳೂರುಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನ ಆರೋಪ; ಇಂದು ಚಿಕ್ಕಮಗಳೂರಿನಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ

ಪ್ರವಾದಿ ಮಹಮ್ಮದ್ ವಿರುದ್ಧ ಅವಹೇಳನ ಆರೋಪ; ಇಂದು ಚಿಕ್ಕಮಗಳೂರಿನಲ್ಲಿ ಎಸ್.ಡಿ.ಪಿ.ಐ ಪ್ರತಿಭಟನೆ

spot_img
- Advertisement -
- Advertisement -

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಎಸ್.ಡಿ.ಪಿ.ಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರವಾದಿ ಮುಹಮ್ಮದ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರರಿಬ್ಬರನ್ನು ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. 

ಬಿಜೆಪಿಯ ರಾಷ್ಟ್ರೀಯ ವಕ್ತಾರರುಗಳಾದ ನೂಪುರ್ ಶರ್ಮ, ಮತ್ತು ನವೀನ್ ಜಿಂದಾಲ್ ಅವರು ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದು, ಅವರನ್ನು ಬಂಧಿಸುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಚಿಕ್ಕಮಗಳೂರು ಜಿಲ್ಲಾ ಸಮಿತಿ ಪದಾಧಿಕಾರಿಗಳು ಚಿಕ್ಕಮಗಳೂರು ನಗರದ ಆಝಾದ್ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು. 

ಎಸ್ಡಿಪಿಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮೀಲ್ ಖಾನ್, ಪಿ.ಎ ಜಿಲ್ಲಾಧ್ಯಕ್ಷರಾದ ಚಾಂದ್ ಪಾಷ,  ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಜಿಲ್ಲಾಧ್ಯಕ್ಷರಾದ ಮೌಲಾನ ಯೂನುಸ್, ಖಾದ್ರಿಯ ಮಸೀದಿಯ ಇಮಾಮ್ ಹಾಫಿಜ್ ಖಾರಿ ಯೂಸುಫ್ ರಝ, ಧರ್ಮ ಗುರುಗಳಾದ ಮೌಲಾನ ಇಬ್ರಾಹಿಂ ಸಯೀದಿ, ಔರಂಗಜೇಬ್ ಆಲಂಗಿರಿ, ಎಐಎಮ್ಡಿಎಫ್ ನ ನಾಸೀರ್ ಸೇರಿದಂತೆ ಎಸ್.ಡಿ,ಪಿ,ಐ ನ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರು ಅನೇಕ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!