ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕೊಡಗಿನ ಹೋಂಸ್ಟೇಯಲ್ಲಿ ಇಬ್ಬರು ಮಹಿಳೆಯರೊಂದಿಗೆ ಶಾರೀಕ್ ತಂಗಿದ್ದ ಅನ್ನೋದು ಗೊತ್ತಾಗಿದೆ.
ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡುವ ಮೊದಲು ಕೊಡಗು ಜಿಲ್ಲೆಯ ಹೋಂಸ್ಟೇಗೆ ಆತ ಮತ್ತು ಇಬ್ಬರು ಮಹಿಳೆಯರು ಸೇರಿ ಆತನ ತಂಡ ಬಂದು ಹೋಗಿತ್ತು ಎಂದು ಇದೀಗ ತನಿಖೆ ವೇಳೆ ತಿಳಿದು ಬಂದಿದೆ.
ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಹಾಗೂ ಆತನ ಸಹಚರರು ಕೊಡಗು ಜಿಲ್ಲೆಗೂ ಭೇಟಿ ನೀಡಿದ್ರು ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಹಾಗೂ ಮಂಗಳೂರು ಪೊಲೀಸರು ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಟಿ.ಶೆಟ್ಟಿಗೇರಿ ಸಮೀಪದ ನೆಮ್ಮಲೆ ಗ್ರಾಮದ ಓಟೆಕಾಡ್ ಹೋಂಸ್ಟೇಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಈ ಹೋಂಸ್ಟೇಗೆ ಶಾರೀಕ್ ಜೊತೆ ಅತನ ಸಹಚರರು ಸೇರಿದಂತೆ ಇಬ್ಬರು ಮಹಿಳೆಯರು ಬಂದು ಹೋಗಿರುವ ಬಗ್ಗೆ ಮಾಹಿತಿ ಲಭಿಸಿದೆ.
ಹೀಗಾಗಿ ಎನ್ಐಎ ತನಿಖಾ ತಂಡ ಹಾಗೂ ಮಂಗಳೂರು ಪೊಲೀಸರು ಹೋಂಸ್ಟೇಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೋಂಸ್ಟೇ ಮಾಲೀಕರನ್ನು ವಿಚಾರಣೆ ನಡೆಸಿದಾಗ ಶಾರೀಕ್ ಹಾಗೂ ಅವನೊಂದಿಗೆ ಸಹಚರರು ಹಾಗೂ ಇಬ್ಬರು ಮಹಿಳೆಯರು ಬಂದು ಹೋಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.ಹೆಚ್ಚಿನ ವಿಚಾರಣೆಗಾಗಿ ಹೋಂಸ್ಟೇ ಮಾಲೀಕನನ್ನು ಮಂಗಳೂರಿಗೆ ಬರುವಂತೆ ಪೊಲೀಸರು ತಿಳಿಸಿ ಹೋಗಿದ್ದಾರೆ.