- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ರೂಪಾಂತರ ಕೊರೊನಾ ವೈರಸ್ ಅಬ್ಬರ ಮತ್ತೆ ಶುರುವಾಗಿದ್ದು , ಇಂಗ್ಲೆಂಡ್ ನಿಂದ ಬಂದ 33 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ . ಈ ಕುರಿತು ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.ಇದೇವೇಳೆ ನಾಳೆಯಿಂದ 5 ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ಡ್ರೈರನ್ ಆರಂಭಿಸಲಾಗುವುದು ಎಂದು ಅವರು ಹೇಳಿದರು.
ಯುಕೆಯಿಂದ ಬಂದಿರುವ 33 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 70 ಜನರ ಬಗ್ಗೆ ಇನ್ನೂ ಮಾಹಿತಿ ಸಿಕ್ಕಿಲ್ಲ, ಅವರ ಜೊತೆಗೆ ಸಂಪರ್ಕದಲ್ಲಿದ್ದ 5 ಜನರಿಗೂ ಕೊರೊನಾ ಪಾಸಿಟಿವ್ ಬಂದಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.
- Advertisement -