Monday, April 29, 2024
Homeಕರಾವಳಿದ.ಕ. ಜಿಲ್ಲೆಗೆ ಶುಭ ಸುದ್ದಿ: ಉಪ್ಪಿನಂಗಡಿಯ ಕೊರೋನಾ ಸೋಂಕಿತ ಮಹಿಳೆ ಸಂಪೂರ್ಣ ಗುಣಮುಖ

ದ.ಕ. ಜಿಲ್ಲೆಗೆ ಶುಭ ಸುದ್ದಿ: ಉಪ್ಪಿನಂಗಡಿಯ ಕೊರೋನಾ ಸೋಂಕಿತ ಮಹಿಳೆ ಸಂಪೂರ್ಣ ಗುಣಮುಖ

spot_img
- Advertisement -
- Advertisement -

ಉಪ್ಪಿನಂಗಡಿ: ಈಗಾಗಲೇ ಕೊರೋನಾ ಮಹಾಮಾರಿಗೆ ಜಿಲ್ಲೆಯಲ್ಲಿ 5 ಮಂದಿ ತಮ್ಮ ಜೀವವನ್ನೇ ತೆತ್ತಿದ್ದಾರೆ. ಆದರೆ ಇವುಗಳ ನಡುವೆ ದ.ಕ. ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರು ಕೊರೊನಾ ಸೋಂಕಿತೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಉಪ್ಪಿನಂಗಡಿ ನಿವಾಸಿ 30 ವರ್ಷದ ಮಹಿಳೆ ಸಂಪೂರ್ಣ ಗುಣಮುಖರಾಗಿದ್ದು, ಗುರುವಾರದಂದು ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ದೆಹಲಿ ಪ್ರವಾಸ ಮುಗಿಸಿ ಆಗಮಿಸಿದ್ದ ಅವರ ಪತಿಯಿಂದ ಮಹಿಳೆಗೆ ಸೋಂಕು ಹರಡಿದೆ. ಈಗಾಗಲೇ ಪತಿ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.

ಎಪ್ರಿಲ್ 18ರಂದು ಈ ಮಹಿಳೆಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಎಪ್ರಿಲ್ 19ರಂದು ಅವರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಿರಂತರ ಚಿಕಿತ್ಸೆಯ ಬಳಿಕ ಇದೀಗ ಮಹಿಳೆ ಗುಣಮುಖರಾಗಿದ್ದಾರೆ. ಮೇ 10 ಹಾಗೂ ಮೇ 13ರಂದು ಮಹಿಳೆಯ ಗಂಟಲ ದ್ರವವನ್ನು ಮತ್ತೆ ಪರೀಕ್ಷೆಗೆ ರವಾನಿಸಲಾಗಿತ್ತು. ಈ ಎರಡೂ ಪರೀಕ್ಷೆಗಳ ವರದಿ ನೆಗೆಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಇನ್ನು ಸದ್ಯ ದ.ಕ. ಜಿಲ್ಲೆಯಲ್ಲಿ 13 ಮಂದಿ ಕೊರೋನಾ ವೈರಸ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ ಜಿಲ್ಲೆಯ ಕೋವಿಡ್ ಆಸ್ಪತ್ರೆಯಿಂದ 16 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

- Advertisement -
spot_img

Latest News

error: Content is protected !!