ಬೆಂಗಳೂರು: ಕೊರೋನಾ ವೈರಸ್ಗೆ ಹೆದರಿ ಕೆಎಸ್ಆರ್ಪಿ ಕಾನ್ಸ್ ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಪೊಲೀಸ್ ಹೆಡ್ ಕಾನ್ಸ್ಟೇಬಲ್ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು. ಈ ಹಿನ್ನೆಲೆ ಆತನನ್ನು ಕೆಎಸ್ಆರ್ಪಿ ಬಸ್ನಲ್ಲಿಯೇ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಬಸ್ನಲ್ಲೇ ಪೊಲೀಸ್ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
50 ವರ್ಷದ ಕೆಎಸ್ ಆರ್ ಪಿ ಹೆಡ್ ಕಾನ್ಸ್ ಸ್ಟೇಬಲ್ಗೆ ನಿನ್ನೆ ಸಂಜೆಯಷ್ಟೇ ಪಾಸಿಟಿವ್ ಬಂದಿತ್ತು. ಹೀಗಾಗಿ ನಿನ್ನೆ ರಾತ್ರಿ ಕೆ ಎಸ್ ಆರ್ ಪಿ ಸಿಬ್ಬಂದಿಯನ್ನು ಕೋರಮಂಗಲದಿಂದ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ವ್ಯಾನ್ನಲ್ಲಿ ಹಿಂದೆ ಕೊರೋನಾ ಪಾಸಿಟಿವ್ ಬಂದಿದ್ದ ಸಿಬ್ಬಂದಿ ಕುಳಿತಿದ್ದರೆ, ಒರ್ವ ಸಿಬ್ಬಂದಿ ವ್ಯಾನ್ ಡ್ರೈವ್ ಮಾಡುತ್ತಿದ್ದರು.
ಬಸ್ನಲ್ಲಿ ಬೇರೆ ಯಾರೂ ಸಹ ಇರಲಿಲ್ಲ. ಹೀಗಾಗಿ ಕೆಎಸ್ಆರ್ಪಿ ಸಿಬ್ಬಂದಿ ತಾನು ಉಟ್ಟಿದ್ದ ಪಂಚೆಯಿಂದಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವ್ಯಾನ್ ಹಿಂಬದಿ ಕೂತರೆ ಯಾರಿಗೂ ಸಹ ಗೊತ್ತಾಗುವುದಿಲ್ಲ. ವ್ಯಾನ್ ವಿಕ್ಟೋರಿಯಾ ಆಸ್ಪತ್ರೆ ಬಳಿ ಹೋದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ರಾತ್ರಿ ಸುಮಾರು10 ಗಂಟೆ ವೇಳೆಗೆ ಈ ಘಟನೆ ನಡೆದಿದೆ.