- Advertisement -
![]()
- Advertisement -
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಕದ್ರಿ ಕಂಬಳ ವಾರ್ಡ್ನ ಬಿಜೆಪಿ ಕಾರ್ಪೊರೇಟರ್ ಮನೋಹರ ಶೆಟ್ಟಿಯವರು ಮ್ಯಾನ್ ಹೋಲ್ ಗೆ ಇಳಿದು ದುರಸ್ತಿ ಕಾರ್ಯ ನಡೆಸುವ ಮೂಲಕ ಎಲ್ಲರ ಮೆಚ್ಚುಗೆ ಪಾತ್ರರಾಗಿದ್ದಾರೆ.

ಕದ್ರಿ ಕಂಬಳ ರಸ್ತೆಯಲ್ಲಿನ ಚರಂಡಿಯಲ್ಲಿ ಮಳೆ ನೀರಿನ ಹರಿವಿನ ಸಮಸ್ಯೆಯಾಗಿ ತಡೆಯುಂಟಾಗಿತ್ತು. ಸ್ಥಳದಲ್ಲಿ ಕಾರ್ಮಿಕರು ಇದ್ದ ಹೊರತಾಗಿಯೂ ಅಲ್ಲಿದ್ದ ಕಾರ್ಪೊರೇಟರ್ ಮನೋಹರ್ ಶೆಟ್ಟಿ ಚೇಂಬರ್ ಒಳಗಡೆ ಇಳಿದಿದ್ದಾರೆ. ಇಲ್ಲಿನ ಸಮಸ್ಯೆ ಅರಿತ ಕಾರ್ಪೊರೇಟರ್ ಮನೆಯಿಂದ ಒಂದು ಜೊತೆ ಬದಲಿ ಬಟ್ಟೆಯನ್ನು ತರಿಸಿಕೊಂಡು ಚೇಂಬರ್ ಒಳಗಡೆ ಇಳಿದು ತಾನೇ ಸ್ವತಃ ಕೆಲಸ ಮಾಡಿ ಚರಂಡಿ ಸರಿಪಡಿಸಿದ್ದಾರೆ.
- Advertisement -


