- Advertisement -
- Advertisement -
ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರ ವಿಪಕ್ಷ ನಾಯಕರ ಕೊಠಡಿ ಪೂಜೆ ವಿಧಾನಸೌಧದಲ್ಲಿ ನಡೆಯಿತು.
ಹೊಸ ವರ್ಷ ಮತ್ತು ಇಂದು ಕೋಟ ಶ್ರೀನಿವಾಸ ಪೂಜಾರಿ ಅವರ ಹುಟ್ಟುಹಬ್ಬ ಕೂಡಾ ಆಗಿದ್ದ ಹಿನ್ನೆಲೆಯಲ್ಲಿ ಸೋಮವಾರ ಕೊಠಡಿ ಪೂಜೆ ನೆರವೇರಿಸಿದ್ದಾರೆ.
ಕೊಠಡಿ ಪೂಜೆ ವೇಳೆ ಕೋಟ ಶ್ರೀನಿವಾಸ ಪೂಜಾರಿಯವರ ಕುಟುಂಬ ಸದಸ್ಯರು ಮತ್ತು ಆಪ್ತರು ಉಪಸ್ಥಿತರಿದ್ದರು.
ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಗಣ್ಯರು ಭೇಟಿ ನೀಡಿ ಶುಭ ಹಾರೈಸಿದರು.
- Advertisement -