Saturday, June 6, 2026
HomeUncategorizedಮಂಗಳೂರು; ಅಪಘಾತದಲ್ಲಿ ವಿದ್ಯಾರ್ಥಿಯ ಮೆದುಳು ನಿಷ್ಕ್ರೀಯ; ಅಂಗಾಂಗ ದಾನಕ್ಕೆ ಮುಂದಾದ ಪೋಷಕರು

ಮಂಗಳೂರು; ಅಪಘಾತದಲ್ಲಿ ವಿದ್ಯಾರ್ಥಿಯ ಮೆದುಳು ನಿಷ್ಕ್ರೀಯ; ಅಂಗಾಂಗ ದಾನಕ್ಕೆ ಮುಂದಾದ ಪೋಷಕರು

- Advertisement -
- Advertisement -

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಆಡಂಕುದ್ರು ಬಳಿ ಬಸ್ಸಿನಿಂದ  ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿರುವ ಮಂಗಳೂರಿನ ಖಾಸಗಿ ಕಾಲೇಜಿನ ಪ್ರಥಮ ವರ್ಷ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ, ಉಳ್ಳಾಲ ಮಾಸ್ತಿಕಟ್ಟೆ ಬೈದೆರೆಪಾಲು ನಿವಾಸಿ ತ್ಯಾಗರಾಜ್ – ಮಮತಾ ಕರ್ಕೇರ ದಂಪತಿ ಪುತ್ರ ಯಶರಾಜ್ (16) ಮಿದುಳು ನಿಷ್ಕ್ರಿಯ ಗೊಂಡಿದೆ. ಮೃತನ ಅಗಲಿಕೆಯ ನೋವಿನಲ್ಲೂ ಹೆತ್ತವರು ಮಹತ್ಕಾರ್ಯವೊಂದಕ್ಕೆ ಮುಂದಾಗಿದ್ದಾರೆ. ಮಗನ ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.

ಸೆ.7 ರ ಬುಧವಾರ ಬೆಳಗ್ಗೆ ಯಶರಾಜ್ ಉಳ್ಳಾಲ , ಮಾಸ್ತಿಕಟ್ಟೆಯಿಂದ ಸಿಟಿ ಬಸ್ಸಲ್ಲಿ ಕಾಲೇಜಿಗೆ ಪಯಣಿಸುತ್ತಿದ್ದಾಗ ರಾ.ಹೆ. 66ರ ಅಡಂ ಕುದ್ರುವಿನಲ್ಲಿ ಬಸ್ಸಿನಿಂದ ಹೊರಗೆ ಎಸೆಯಲ್ಪಟ್ಟಿದ್ದ. ತಲೆಗೆ ಗಂಭೀರ ಗಾಯಗೊಂಡಿದ್ದ ಯಶರಾಜ್‌ ಅನ್ನು ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ವಾರದಿಂದ ನಿರಂತರ ಚಿಕಿತ್ಸೆ ನೀಡುತ್ತಿದ್ದರೂ ಯಶರಾಜ್ ಆರೋಗ್ಯದಲ್ಲಿ ಚೇತರಿಕೆ ಕಾಣದೆ ಇಂದು ಮಧ್ಯಾಹ್ನ ಮೆದುಳು ನಿಷ್ಕ್ರಿಯಗೊಂಡಿದ್ದು, ಹೆತ್ತವರು ಬಾಲಕನ ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿ ಯಾಗಿದ್ದ ಯಶರಾಜ್ ಎಸ್ ಎಸ್ ಎಲ್ ಸಿಯಲ್ಲಿ ಅಗ್ರಸ್ಥಾನ ಪಡೆದು ಕಂಪ್ಯೂಟರ್ ವಿಜ್ಞಾನದಲ್ಲಿ ವ್ಯಾಸಂಗ ನಡೆಸುವ ಕನಸನ್ನು ಕಂಡಿದ್ದ.ಆದರೆ ವಿಧಿಯಾಟಕ್ಕೆ ಬಲಿಯಾಗಿದ್ದಾನೆ.

- Advertisement -

Latest News

error: Content is protected !!