- Advertisement -
- Advertisement -
ಬಂಟ್ವಾಳ: ಹಾಲಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತವಾಗಿ ದಂಪತಿಗೆ ಗಾಯವಾಗಿರುವ ಘಟನೆ ಮೆಲ್ಕಾರ್ ಜಂಕ್ಷನ್ನಲ್ಲಿ ನಡೆದಿದೆ.
ಘಟನೆಯಲ್ಲಿ ವಿಟ್ಲ ಕಸ್ಬಾ ನಿವಾಸಿಗಳಾದ ಸವಾರ ಗಂಗಾಧರ ಹಾಗೂ ಸಹಸವಾರೆ ರೇಷ್ಮಾ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟ್ಯಾಂಕರನ್ನು ಚಾಲಕ ಅಜಾಗರೂಕತೆಯಿಂದ ಚಲಾಯಿಸಿ ಬೈಕಿಗೆ ಢಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -