ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 918 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11923 ಕ್ಕೆ ಏರಿಕೆಯಾಗಿದೆ.
ಇವತ್ತು ಒಂದೇ ದಿನ 371 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 7,287 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಬರೋಬ್ಬರಿ 596 ಮಂದಿಗೆ ಸೋಂಕು ತಗಲಿದೆ. ದಕ್ಷಿಣ ಕನ್ನಡ 49, ಕಲಬುರಗಿ 33, ಬಳ್ಳಾರಿ, ಗದಗ ತಲಾ 24, ಧಾರವಾಡ 19, ಬೀದರ್ 17, ಉಡುಪಿ, ಹಾಸನ, ಕೋಲಾರ ತಲಾ 14 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಯಾದಗಿರಿ, ಶಿವಮೊಗ್ಗ, ತುಮಕೂರು, ಚಾಮರಾಜನಗರ ತಲಾ 13, ಮಂಡ್ಯ, ಮೈಸೂರು ತಲಾ 12, ಕೊಡಗು 9, ರಾಯಚೂರು, ದಾವಣಗೆರೆ ತಲಾ 6, ಬೆಂಗಳೂರು ಗ್ರಾಮಾಂತರ 5, ಉತ್ತರ ಕನ್ನಡ, ಬಾಗಲಕೋಟೆ, ಚಿಕ್ಕಮಗಳೂರು, ಚಿತ್ರದುರ್ಗ ತಲಾ 2, ಬೆಳಗಾವಿ, ಚಿಕ್ಕಬಳ್ಳಾಪುರ, ಹಾವೇರಿ, ಕೊಪ್ಪಳ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
4441 ಸಕ್ರಿಯ ಪ್ರಕರಣಗಳು ಇದ್ದು 197 ಮಂದಿ ಐಸಿಯುನಲ್ಲಿ ಇದ್ದಾರೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 11 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 191 ಕ್ಕೆ ಏರಿಕೆಯಾಗಿದೆ.