- Advertisement -
- Advertisement -
ಮಂಗಳೂರು: ಕೋವಿಡ್ -19 ಲಸಿಕೆ ಅಭಿಯಾನವನ್ನು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಅವರು ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ ಇಂದು ಉದ್ಘಾಟಿಸಿದರು.
12-14 ವರ್ಷ ವಯಸ್ಸಿನ ಮಕ್ಕಳಿಗೆ ಕಾರ್ಬೆವಾಕ್ಸ್ ಲಸಿಕೆ ನೀಡಲಾಯಿತು. ಡಾ.ಕೆ.ವಿ.ರಾಜೇಂದ್ರ ಮಾತನಾಡಿ, “ರಾಜ್ಯ ಸರ್ಕಾರದ ನಿರ್ದೇಶನದಂತೆ 12-14 ವರ್ಷ ವಯಸ್ಸಿನವರಿಗೆ ಕೋವಿಡ್ 19 ಗೆ, ಕಾರ್ಬೆವಾಕ್ಸ್ ಲಸಿಕೆಯನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯಲ್ಲಿ ಶೇ.92ರಷ್ಟು ಜನರಿಗೆ ಕೋವಿಡ್ ಲಸಿಕೆ ಎರಡನೇ ಡೋಸ್ ಹಾಕಲಾಗಿದೆ.
ಇತರ ಹಲವು ಜಿಲ್ಲೆಗಳು ಈಗಾಗಲೇ ಎರಡನೇ ಡೋಸ್ ಲಸಿಕೆಯನ್ನು 100% ಪೂರ್ಣಗೊಳಿಸಿವೆ. 15-18 ವರ್ಷ ವಯಸ್ಸಿನ 82% ಜನರು ಲಸಿಕೆಯನ್ನು ಪೂರ್ಣಗೊಳಿಸಿದ್ದಾರೆ ಎಂದರು.
ಜಿಲ್ಲಾ ಆರೋಗ್ಯಾಧಿಕಾರಿ ಕಿಶೋರ್ ಕುಮಾರ್, ನೋಡಲ್ ಅಧಿಕಾರಿ ಅಣ್ಣಯ್ಯ ಕುಲಾಲ್, ಜಿಲ್ಲಾ ಪಂಚಾಯತ್ ಸಿಇಒ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
- Advertisement -