- Advertisement -
- Advertisement -
ಬೆಂಗಳೂರು: ಚಿಕ್ಕವಯಸ್ಸಿನ, ಸದಾ ಲವಲವಿಕೆಯಿಂದ ಇರುತ್ತಿದ್ದ ನಟ ಚಿರಂಜೀವಿ ಸರ್ಜಾ ಅಕಾಲಿಕ ಮರಣಕ್ಕೆ ಒಳಗಾಗಿದ್ದು, ಕಳೆದ ಎರಡು ದಿನಗಳ ಹಿಂದೆ ಕೂಡ ಲಘು ಹೃದಯಾಘಾತವಾಗಿತ್ತು ಎಂಬ ಮಾಹಿತಿಯೂ ಸಿಕ್ಕಿದೆ.
ಹೃದಯಾಘಾತದಿಂದ ಮೃತಪಟ್ಟ ಚಿರು ಸರ್ಜಾ ಅವರ ಗಂಟಲು ದ್ರವದ ಮಾದರಿಯನ್ನು ಕೊವಿಡ್-19 ಟೆಸ್ಟ್ಗೆ ಒಳಪಡಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಚಿರು ಗಂಟಲು ದ್ರವದ ಮಾದರಿಯನ್ನು ಸಂಗ್ರಹಿಸಿದ್ದಾರೆ.
ಚಿರಂಜೀವಿ ಮೃತದೇಹವನ್ನು ಕಿಮ್ಸ್ಗೆ ಸ್ಥಳಾಂತರಿಸಲಾಗುವುದು. ಬಳಿಕವಷ್ಟೇ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.
- Advertisement -