Wednesday, May 15, 2024
Homeಕರಾವಳಿಬೆಳ್ತಂಗಡಿ : ಪಟಾಕಿ ಅಂಗಡಿ ಮೇಲೆ ಅಧಿಕಾರಿಗಳಿಂದ ದಾಳಿ; ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋಡೌನಿಗೆ...

ಬೆಳ್ತಂಗಡಿ : ಪಟಾಕಿ ಅಂಗಡಿ ಮೇಲೆ ಅಧಿಕಾರಿಗಳಿಂದ ದಾಳಿ; ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋಡೌನಿಗೆ ಬೀಗ

spot_img
- Advertisement -
- Advertisement -

ಬೆಳ್ತಂಗಡಿ : ವೇಣೂರು ಪಟಾಕಿ ತಯಾರಿಕೆ ಮಾಡುವ ವೇಳೆ ಸ್ಫೋಟಗೊಂಡ ಪ್ರಕರಣ ಸಂಬಂಧ ಪಟಾಕಿ ಮಾರಾಟ ಮತ್ತು ಗೋಡೌನ್ ಮಳಿಗೆಗಳಿಗೆ ತಾತ್ಕಾಲಿಕ ಪರವಾನಿಗೆ ಜ.29 ರಂದು ಜಿಲ್ಲಾಧಿಕಾರಿ ರದ್ದು ಮಾಡಿದ್ದಾರೆ. ಈ ಸಂಬಂಧ ಪಟಾಕಿ ಮಾರಾಟ ಮತ್ತು ದಾಸ್ತಾನು ಗೋಡೌನ್ ಮೇಲೆ ಜ.30 ರಂದು ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಒಟ್ಟು 9 ಕಡೆ ಪಟಾಕಿ ಮಾರಾಟ ಮತ್ತು ದಾಸ್ತಾನು ಗೋಡೌನ್ ಇದ್ದು. ಬೆಳ್ತಂಗಡಿ ತಹಶೀಲ್ದಾರ್ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಜ.30 ರಂದು ಏಕಕಾಲದಲ್ಲಿ 7 ಸ್ಥಳಗಳಿಗೆ ದಾಳಿ ಮಾಡಿ ಪರಿಶೀಲನೆ ನಡೆಸಿ ಪಟಾಕಿ ಮಾರಾಟ ಮತ್ತು ದಾಸ್ತಾನು ಮಾಡದಂತೆ ಅಂಗಡಿಗೆ ನೋಟಿಸ್ ಅಂಟಿಸಿದ್ದಾರೆ.

*ಮೂರು ಪಟಾಕಿ ದಾಸ್ತಾನು ಗೋಡೌನ್ ಸೀಝ್:*
ಉಜಿರೆ ಪ್ರಭಾತ್ ಸ್ಟೋರ್ ,ಬೆಳ್ತಂಗಡಿ ಮುಖ್ಯರಸ್ತೆ ಬೆಳ್ತಂಗಡಿ ಜನರಲ್ ಮರ್ಚೆಂಟ್ , ಚಾಮುಂಡೇಶ್ವರಿ ಎಂಟರ್ ಪ್ರೈಸಸ್ ಬೆಳ್ತಂಗಡಿ ಇದರ ಮೂರು ಗೋಡೌನ್ ನಲ್ಲಿ ಪಟಾಕಿ ದಾಸ್ತಾನು ಮಾಡಲಾಗಿದ್ದು ಇದನ್ನು ಕಂದಾಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಮುಂದಿನ ಸರಕಾರದ ಆದೇಶದವರೆಗೂ ಬೀಗ ಹಾಕಿದ್ದಾರೆ.

*ದಾಳಿ ಮಾಡಲಾದ ಪಟಾಕಿ ಅಂಗಡಿಗಳು:* ಬೆಳ್ತಂಗಡಿಯ ಎಸ್.ಪುಂಡಲೀಕ ಭಟ್ ಮಾಲೀಕತ್ವದ ಪ್ರಭಾತ್ ಸ್ಟೋರ್, ಬೆಳ್ತಂಗಡಿ ಮುಖ್ಯ ರಸ್ತೆಯಲ್ಲಿರುವ ಕೆ.ಮಂಜುನಾಥ್ ಕಾಮತ್ ಮಾಲೀಕತ್ವದ ಜನರಲ್ ಮರ್ಚೆಂಟ್, ಬೆಳ್ತಂಗಡಿಯ ಸುಧೀರ್ ಹೊಳ್ಳ ಮಾಲೀಕತ್ವದ ಚಾಮುಂಡೇಶ್ವರಿ ಎಂಟರ್ ಪ್ರೈಸಸ್ , ಉಜಿರೆಯ ಬಿ.ರಾಜರಾಮ್ ಭಟ್ ಮಾಲೀಕತ್ವದ ಮಂಜು ಶ್ರೀ ಸ್ಟೋರ್ , ಉಜಿರೆಯ ಪ್ರಭಾತ್ ಸ್ಟೋರ್,ಪುಂಜಾಲಕಟ್ಟೆಯ ಬಿ.ವಸಂತ ಬಾಳಿಗ ಮಾಲೀಕತ್ವದ ವಸಂತ್ ಸ್ಟೋರ್ , ವೇಣೂರಿನ ಬಿ.ಮೋಹನ್ ದಾಸ್ ನಾಯಕ್ ಸೇರಿದಂತೆ ಏಳು ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ.

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮತ್ತು ಸಿಬ್ಬಂದಿ ಹಾಗೂ ಅಗ್ನಿಶಾಮಕ ರಿಜಿನಲ್ ಫೈರ್ ಅಫೀಸರ್ ರಂಗನಾಥ್ ಮತ್ತು ಸಿಬ್ಬಂದಿ ಮತ್ತು ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

- Advertisement -
spot_img

Latest News

error: Content is protected !!