ಕಾರ್ಕಳ : 11 ಕಾರ್ಕಳದ ಎಂಪಿಎಂ ಪ್ರಥಮ ದರ್ಜೆ ಕಾಲೇಜು ಇಲ್ಲಿನ ವಿದ್ಯಾರ್ಥಿಗಳಿಂದ MPL 2022-ಕ್ರಿಕೆಟ್ ಕ್ರೀಡಾಕೂಟ ನಡೆಯಿತು.
ಈ ಹಿಂದೆ ಕಾಲೇಜಿನಲ್ಲಿ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ ಕೃಷ್ಣಮೂರ್ತಿ ವೈದ್ಯರ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಕ್ರೀಡಾಕೂಟಕ್ಕೆ ಹಾಗೂ ಕ್ರೀಡಾಳುಗಳಿಗೆ ಶುಭಹಾರೈಸಿದರು. ಇದೇ ವೇಳೆ ಅವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲರು, ಈ ಕ್ರೀಡಾಕೂಟದ ಆಯೋಜನೆಯ ತಯಾರಿಗಳು ಉತ್ತಮವಾಗಿದೆ ಈ ರೀತಿಯ ಕಾರ್ಯಕ್ರಮಗಳಿಂದ ವಿದ್ಯಾರ್ಥಿ ಗಳಲ್ಲಿಯೂ ಆಯೋಜನೆಯ ಕೌಶಲ್ಯಗಳು ಉತ್ತಮಗೊಳ್ಳುತ್ತದೆ ಎಂದರು ಹಾಗೂ ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ 8 ತಂಡಗಳಿಗೂ ಶುಭಹಾರೈಸಿದರು ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಶ್ರೀ ವರ್ಮ ಅಜ್ರಿ ಎಂ ,ಮುಖ್ಯ ಅತಿಥಿಗಳಾದ ಕೃಷ್ಣಮೂರ್ತಿ ವೈದ್ಯ ಸೇರಿದಂತೆ ಕಾಲೇಜಿನ ಉಪನ್ಯಾಸಕ ವರ್ಗ ಕ್ರೀಡಾಪಟುಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು ಈ ಕಾರ್ಯಕ್ರಮವನ್ನು ವಿದ್ಯಾರ್ಥಿ ಅಜಿತ್ ರವರು ನಿರೂಪಿಸಿದರು