- Advertisement -
- Advertisement -
ಮೈಸೂರು: ಸತತ ಮೂರನೇ ವರ್ಷ ಕೂಡ ಮೈಸೂರಿನ ಚಾಮರಾಜೇಂದ್ರ ಮೃಗಾಲಯದಲ್ಲಿನ ಚಿರತೆಯೊಂದನ್ನು ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ವೇದಾ ಕೃಷ್ಣಮೂರ್ತಿ ದತ್ತು ಪಡೆದಿದ್ದಾರೆ.
ಈ ಕುರಿತು ವೇದಾ ಕೃಷ್ಣಮೂರ್ತಿ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೈಸೂರು ಮೃಗಾಲಯಕ್ಕೆ ಇತ್ತೀಚೆಗೆ ಅವರು ಭೇಟಿ ನೀಡಿದ್ದರು. ಆಗ ಚಿರತೆಯೊಂದನ್ನು ಒಂದು ವರ್ಷದ ಅವಧಿಗೆ ದತ್ತು ಪಡೆದುಕೊಂಡಿದ್ದರು.
- Advertisement -