- Advertisement -
- Advertisement -
ಪುತ್ತೂರು: ಇಲ್ಲಿನ ಆನೆಮಜಲು ಪರಿಸರದಲ್ಲಿ ಫಾ: ಬಾಲ್ತಿಜಾರ್ ಪಿಂಟೋ, ಧರ್ಮ ಗುರುಗಳು, ಸಂತ ಅಂತೋಣಿ ಚರ್ಚ್, ಬನ್ನೂರು ಎಂಬವರ ಅಧೀನದಲ್ಲಿರುವ ಕ್ರೈಸ್ತ ದಫನ್ ಭೂಮಿಯಲ್ಲಿ ಯಾರೋ ದುಷ್ಕರ್ಮಿಗಳು ಸಮಾಧಿಯೊಂದನ್ನು ಒಡೆದು ಹಾಕಿರುವ ಬಗ್ಗೆ ದಿನಾಂಕ: 14.06.2025 ರಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಘಟನಾಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಲ್ಲದೇ ಕೃತ್ಯವೆಸಗಿದ ದುಷ್ಕರ್ಮಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
- Advertisement -