Friday, May 17, 2024
Homeಕರಾವಳಿಮಂಗಳೂರಿನಲ್ಲಿ ಕುದುರೆಮುಖ ಅದಿರು ಕಂಪನಿಯ ಸಿಎಸ್ ಆರ್ ಅನುದಾನ ವಿತರಣೆ

ಮಂಗಳೂರಿನಲ್ಲಿ ಕುದುರೆಮುಖ ಅದಿರು ಕಂಪನಿಯ ಸಿಎಸ್ ಆರ್ ಅನುದಾನ ವಿತರಣೆ

spot_img
- Advertisement -
- Advertisement -

ಮಂಗಳೂರು: ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ 2022 ರ ಸಿಎಸ್ಆರ್ ಅನುದಾನ ವಿತರಣಾ ಕಾರ್ಯಕ್ರಮ ಇಂದು ಮಂಗಳೂರಿನಲ್ಲಿ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಿಕ್ಷಣ, ಆರೋಗ್ಯ, ಸೇವಾ ಹಾಗೂ ರಕ್ಷಣೆಗೆ ಸಂಬಂಧಿಸಿದ ವಿವಿಧ ಸಂಸ್ಥೆಗಳಿಗೆ ಒಟ್ಟು 168.00 ಲಕ್ಷ ರೂಪಾಯಿಗಳ ಅನುದಾನದ ಆದೇಶಗಳನ್ನು ಫಲಾನುಭವಿಗಳಿಗೆ ವಿತರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಕುದುರೆಮುಖ ಕಬ್ಬಿಣ ಅದಿರು ಕಂಪೆನಿಯ ಸಿಎಂಡಿ ಟಿ. ಸಾಮಿನಾಥನ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ 2022 ರ ಡಿಸೆಂಬರ್ ನಲ್ಲಿ ನಡೆಯಲಿರುವ ಅಖಿಲ ಭಾರತ ಕುದುರೆಮುಖ ಚೆಸ್ ಟ್ರೋಫಿಯ ಕಿರು ಹೊತ್ತಿಗೆಯನ್ನು ಬಿಡುಗಡೆಗೊಳಿಸಲಾಯಿತು.

- Advertisement -
spot_img

Latest News

error: Content is protected !!