- Advertisement -
- Advertisement -
ಬೆಂಗಳೂರು; ಜೊತೆಯಲಿಯ ಆರ್ಯವರ್ಧನ್ ಪಾತ್ರವನ್ನು ಮಾಜಿ ಸಚಿವ ಸಿ.ಟ.ರವಿ ಅವರಿಗೆ ನೀಡಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹ ಜೋರಾಗಿದೆ.
ಈ ಪಾತ್ರಕ್ಕೆ ಅನೂಪ್ ಭಂಡಾರಿ, ಸುನೀಲ್ ಪುರಾಣಿಕ್, ಹರೀಶ್ ರಾಜ್ ಹೀಗೆ ಅನೇಕ ಕಲಾವಿದರ ಹೆಸರು ಕೇಳಿ ಬರುತ್ತಿವೆ. ಈ ನಡುವೆ ಆರ್ಯವರ್ಧನ್ ಪಾತ್ರವನ್ನು ಮಾಜಿ ಸಚಿವ ಸಿ.ಟಿ.ರವಿ ಅವರಿಗೆ ಯಾಕೆ ಕೊಡಬಾರದು ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.
ಸಿ.ಟಿ. ರವಿ ಅವರು ಈವರೆಗೂ ಯಾವುದೇ ಧಾರಾವಾಹಿ, ಸಿನಿಮಾದಲ್ಲಿ ನಟಿಸದೇ ಇದ್ದರೂ, ಅವರ ಲುಕ್ ಆರ್ಯವರ್ಧನ್ ಪಾತ್ರಧಾರಿಯನ್ನು ಹೋಲುತ್ತದೆ. ಹಾಗಾಗಿ ಸಿ.ಟಿ. ರವಿ ಅವರಿಗೆ ಅವಕಾಶ ಕೊಡಿ ಎಂದು ಅನೇಕರು ಆಗ್ರಹಿಸಿದ್ದಾರೆ. ಇದೊಂದು ರೀತಿಯಲ್ಲಿ ತಮಾಷೆ ಅನಿಸಿದರೂ, ಆರ್ಯವರ್ಧನ್ ಪಾತ್ರವನ್ನು ಅನೇಕರು ಸಿ.ಟಿ ರವಿ ಅವರಲ್ಲಿ ಕಾಣುತ್ತಿದ್ದಾರೆ. ಅಲ್ಲದೇ, ಅನಿರುದ್ಧ ಅವರಂತೆ ಗೆಟಪ್ ಹೊಂದಿರುವ ರವಿ ಅವರ ಫೋಟೋವನ್ನು ಹಲವರು ಹಾಕಿದ್ದಾರೆ.
- Advertisement -