ಮಂಗಳೂರು: ರಾಜರಾಜೇಶ್ವರಿನಗರ ಶಾಸಕ ಮುನಿರತ್ನ ವಿರುದ್ದದ ಪ್ರಕರಣಗಳ ಪ್ರಾಸಿಕ್ಯೂಷನ್ ಗೆ ವಿಶೇಷ ತನಿಖಾ ತಂಡ ಅನುಮತಿ ಕೋರಿರುವ ವಿಚಾರ ಗಮನಕ್ಕೆ ಬಂದಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಇಂದು ಹೇಳಿಕೆ ನೀಡಿದ ಸ್ಪೀಕರ್ ಖಾದರ್, ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಮನವಿ ಮಾಡಿದ್ದು, ಈ ಬಗ್ಗೆ ವಿಧಾನಸಭೆ ಕಾರ್ಯದರ್ಶಿಯವರ ಜೊತೆ ಚರ್ಚಿಸಿ ಮಾಹಿತಿ ಪಡೆದುಕೊಳ್ಳುವುದಾಗಿ ಹೇಳಿದ್ದಾರೆ.
ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ನಡುವಿನ ಜಟಾಪಟಿ ಅತ್ಯಂತ ದುರದೃಷ್ಟಕರ ಎಂದು ಹೇಳಿರುವ ಯು.ಟಿ. ಖಾದರ್,
ಈ ಘಟನೆ ವಿಧಾನ ಪರಿಷತ್ ನಲ್ಲಿ ನಡೆದಿದ್ದರೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ನಮ್ಮ ಸದಸ್ಯರು ಎಂದು ಹೇಳಿದ್ದಾರೆ.
ಅಲ್ಲದೇ ಘಟನೆ ಬಗ್ಗೆ ವಿಧಾನಸಭೆಯ ಹಕ್ಕುಚ್ಯುತಿ ಸಮಿತಿಗೆ ಕೊಡಬೇಕೆಂಬ ಪ್ರಸ್ತಾವನೆ ಇತ್ತು, ಹಾಗಾಗಿ ಕೊಡಲಾಗಿದೆ ಎಂದು ಹೇಳಿರುವ ಸ್ಪೀಕರ್, ವಿಧಾನ ಪರಿಷತ್ ಸಭಾಪತಿಗಳು ನಿಯಮಾನುಸಾರ ತೀರ್ಮಾನ ತೆಗೆದುಕೊಳ್ಳುತ್ತಾರೆ ಮತ್ತು ಘಟನೆಯ
ಸ್ಥಳ ಮಹಜರಿಗೆ ಅವಕಾಶ ಕೂಡಾ ಸಭಾಪತಿಗಳದ್ದೇ ನಿರ್ಧಾರವಾಗಿರುತ್ತದೆ ಎಂದು ತಿಳಿಸಿದ್ದಾರೆ.