ಚಿಕ್ಕಮಗಳೂರು : ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ ಆಗಸ್ಟ್ ವರೆಗೆ ಎಲ್ಲ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಹೀಗಿದ್ದರೂ ಸಚಿವರೇ ಸರ್ಕಾರದ ರೂಲ್ಸ್ ಬ್ರೇಕ್ ಮಾಡಿದ್ದಾರೆ. ಹೌದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಇಂದು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದಾರೆ.
ಹೀಗಾಗಿ ಜನಸಾಮಾನ್ಯರಿಗೆ ಒಂದು ರೂಲ್ಸ್… ಜನಪ್ರತಿನಿಧಿಗಳಿಗೆ ಒಂದು ರೂಲ್ಸ್ ಮಾಡಲಾಗಿದೆಯಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ.
ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಇಂದು ಲಾಕ್ ಡೌನ್ ನಿಯಮವನ್ನು ಗಾಳಿಗೆ ತೂರಿ ಪ್ರವಾಸಿ ತಾಣಗಳಿಗೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ಶಾಸಕ ಕುಮಾರಸ್ವಾಮಿ, ಜನಪ್ರತಿನಿಧಿಗಳು, ಬೆಂಬಲಿಗರು ಸಚಿವರಿಗೆ ಸಾಥ್ ಕೊಟ್ಟಿದ್ದಾರೆ. ಸಿ.ಟಿ.ರವಿ ಅಂಡ್ ಟೀಂ ಇಂದು ಚಿಕ್ಕಮಗಳೂರಿನ ದೇವರಮನೆ, ಹೇಮಾವತಿ ನದಿ ಮೂಲ, ಬಲ್ಲಾಳರಾಯನ ದುರ್ಗಕ್ಕೆ ಭೇಟಿ ನೀಡಿದ್ದಾರೆ.
ಈ ವೇೆಳೆ, ಸ್ಥಳದ ಕುರಿತು ಮಾಹಿತಿಯನ್ನು ಸಂಗ್ರಹಿಸಿದ್ದಾರೆ. ಈ ಸಂದರ್ಭ ಶಾಸಕ ಕುಮಾರಸ್ವಾಮಿ ಮಾಸ್ಕ್ ಧರಿಸದೇ ನಿಯಮಗಳನ್ನು ಉಲ್ಲಂಘಿಸಿದ್ದರೇ ಸ್ಥಳದಲ್ಲಿದ್ದವರು ಸಾಮಾಜಿಕ ಅಂತರದ ನಿಯಮವನ್ನು ಉಲ್ಲಂಘಿಸಿದರು.