Monday, June 30, 2025
Homeತಾಜಾ ಸುದ್ದಿವಿಹೆಚ್ಪಿ, ಭಜರಂಗ ದಳದ ಕಾರ್ಯಕರ್ತರಿಂದ ಪ್ರತಿಭಟನೆ ಹಿನ್ನಲೆ: ಸಕಲೇಶಪುರದಲ್ಲಿ ಮೂರು ಕಡೆ ನಿಷೇಧಾಜ್ಞೆ ಜಾರಿ

ವಿಹೆಚ್ಪಿ, ಭಜರಂಗ ದಳದ ಕಾರ್ಯಕರ್ತರಿಂದ ಪ್ರತಿಭಟನೆ ಹಿನ್ನಲೆ: ಸಕಲೇಶಪುರದಲ್ಲಿ ಮೂರು ಕಡೆ ನಿಷೇಧಾಜ್ಞೆ ಜಾರಿ

spot_img
- Advertisement -
- Advertisement -

ಹಾಸನ: ಗೋಹತ್ಯೆ ಹಾಗೂ ಗೋ ಮಾಂಸ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಹಾಗೂ ಭಜರಂಗದಳ ಸಂಘಟನೆಯಿಂದ ಕುಶಾಲನಗರ ಚಲೋ ಪ್ರತಿಭಟನೆ ಹಿನ್ನಲೆಯಲ್ಲಿ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ ಸಕಲೇಶಪುರ ನಗರದ ಮೂರು ಕಡೆ ನಿಷೇಧಾಜ್ಞೆ ಜಾರಿಯಾಗಿದೆ.

ಉಪವಿಭಾಗಾಧಿಕಾರಿ ಗಿರೀಶ್ ಆರ್.ನಂದನ್ ನಿಷೇದಾಜ್ಞೆ ಜಾರಿ ಮಾಡಿ ಆದೇಶ ಪ್ರಕಟಿಸಿದ್ದಾರೆ. ಹೀಗಾಗಿ ಸಕಲೇಶಪುರ ಪಟ್ಟಣದ ಕುಶಾಲನಗರ, ಪ್ರೇಮನಗರ ಹಾಗೂ ಅಜಾದ್ ರಸ್ತೆಯಲ್ಲಿ ಇಂದು ನಿಷೇಧಾಜ್ಞೆ ಜಾರಿಯಾಗಿದೆ.

ಸಕಲೇಶಪುರದಲ್ಲಿ ಗೋ ಹತ್ಯೆ ನಡೆಸಿ ಚರಂಡಿಗಳಲ್ಲಿ ರಕ್ತ, ತ್ಯಾಜ್ಯ ಹರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಕೊಡುವಂತೆ ಮನವಿ ಮಾಡಲಾಗಿತ್ತು. ಜಿಲ್ಲಾಡಳಿತ ಪ್ರತಿಭಟನೆಗೆ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದೆ.

- Advertisement -
spot_img

Latest News

error: Content is protected !!