Saturday, May 18, 2024
Homeತಾಜಾ ಸುದ್ದಿಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ: ಬೈಕ್ ನಲ್ಲಿ  40 ವರ್ಷಕ್ಕಿಂತ ಕಿರಿಯ ವಯಸ್ಸಿನ ಯುವಕರು ಹಿಂಬದಿ...

ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ: ಬೈಕ್ ನಲ್ಲಿ  40 ವರ್ಷಕ್ಕಿಂತ ಕಿರಿಯ ವಯಸ್ಸಿನ ಯುವಕರು ಹಿಂಬದಿ ಕೂತು ಪ್ರಯಾಣಿಸುವುದು ನಿಷೇಧ

spot_img
- Advertisement -
- Advertisement -

ಶಿವಮೊಗ್ಗ: ಚೂರಿ ಇರಿತ ಪ್ರಕರಣ ಹಿನ್ನೆಲೆ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಆ. 15 ರ ಮದ್ಯಾಹ್ನ 3 ಗಂಟೆಯಿಂದ ಆ. 18 ರಂದು ರಾತ್ರಿ 10 ಗಂಟೆಯವರೆಗೆ ಈ ಕೆಳಕಂಡ ನಿಬಂಧನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಎಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

5 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿರ್ಬಂಧಿಸಿದೆ. ಯಾವುದೇ ಮೆರವಣಿಗೆ, ಸಭೆ, ಸಮಾರಂಭ ಮತ್ತು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶಗಳನ್ನು ನಿಷೇಧಿಸಲಾಗಿದೆ. ಯಾವುದೇ ರೀತಿ ಆಯುಧ ಹಾಗೂ ಮಾರಕಾಸ್ತ್ರಗಳನ್ನು ಹಾಗೂ ಸ್ಫೋಟಕಗಳನ್ನು ತೆಗೆದುಕೊಂಡು ಹೋಗುವುದು ಮತ್ತು ಸಂಗ್ರಹಿಸುವುದು ನಿಷೇಧಿಸಲಾಗಿದೆ.

ವ್ಯಕ್ತಿ /ಶವಗಳ ಪ್ರತಿಕೃತಿಗಳನ್ನು ಪ್ರದರ್ಶನ /ದಹನ ಮಾಡುವುದು ಮತ್ತು ಪ್ರಚೋದನಕಾರಿ ಘೋಷಣೆ ಹಾಗೂ ಭಿತ್ತಿಚಿತ್ರಗಳನ್ನು ತೋರಿಸುವುದು ನಿಷೇಧಿಸಲಾಗಿದೆ.

ದ್ವಿಚಕ್ರ ವಾಹನ ಸವಾರರು ಹಿಂಬದಿಯಲ್ಲಿ 40 ವರ್ಷಕ್ಕಿಂತ ಕಿರಿಯ ವಯಸ್ಸಿನ ಗಂಡಸರನ್ನು ಕೂರಿಸಿಕೊಂಡು ಹೋಗುವುದನ್ನು ನಿಷೇದಿಸಲಾಗಿದೆ.(40 ವರ್ಷ ಮೇಲ್ಪಟ್ಟ ವಯಸ್ಕರು ಮತ್ತು ಮಹಿಳೆಯರನ್ನು ಹೊರತುಪಡಿಸಿ)ರಾತ್ರಿ 9 ಗಂಟೆಯಿಂದ ಬೆಳಗಿನ ಜಾವ 5 ಗಂಟೆವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ.(ತುರ್ತು ಸಂದರ್ಭವನ್ನು ಹೊರತುಪಡಿಸಿ).

- Advertisement -
spot_img

Latest News

error: Content is protected !!