- Advertisement -
- Advertisement -
ಮಂಗಳೂರು: ಒಂದೆಡೆ ಕೊರೊನಾ ಆತಂಕ ಹೆಚ್ಚಾಗುತ್ತಿದೆ. ಇದರ ನಡುವೆ ಇದೀಗ , ದಕ್ಷಿಣ ಕರಾವಳಿಗೆ ಚಂಡಮಾರುತದ ಭೀತಿ ಎದುರಾಗಿದೆ.
ಅರಬ್ಬೀ ಸಮುದ್ರದಲ್ಲಿ ಎದ್ದ ತೌಕ್ತೆ ಚಂಡಮಾರುತದಿಂದಾಗಿ ಕೊಂಕಣ, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಚಂಡಮಾರುತವು ಮೇ 16ರಂದು ಕರ್ನಾಟಕ, ಕೇರಳದ ಕರಾವಳಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದಲೇ ಚಂಡಮಾರುತದ ಪರಿಣಾಮಗಳು ಕಂಡು ಬರಲಿವೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇನ್ನು ನಿನ್ನೆಯೇ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ ಮೀನುಗಾರರಿಗೆ ಕೋಸ್ಟಲ್ ಗಾರ್ಡ್ ದಂಡಕ್ಕೆ ವಾಪಾಸ್ ಬರುತ್ತೆ ಎಚ್ಚರಿಕೆ ನೀಡಿದ್ದರು.
- Advertisement -