- Advertisement -
- Advertisement -
ಬಳ್ಳಾರಿ : ಬಳ್ಳಾರಿ ಜಿಲ್ಲೆಯ ತೋರಣಗಲ್ಲಿನ ಜಿಂದಾಲ್ ಕಂಪನಿಯಲ್ಲಿ ಕೆಲವು ದಿನಗಳ ಹಿಂದೆ ಕೊರೊನಾ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾಗಿತ್ತು. ಇದೀಗ ಅದರ ಬೆನ್ನಲ್ಲೇ ಜಿಂದಾಲ್ ಕಂಪನಿಯಲ್ಲಿ ಭಾರೀ ಅನಾಹುತ ಸಂಭವಿಸಿದೆ.
ಹೌದು.. ಜಿಂದಾಲ್ ಕಂಪನಿಯಲ್ಲಿ ಇದ್ದಕಿದ್ದಂತೆ ಸಿಲಿಂಡರ್ ಸ್ಫೋಟಗೊಂಡು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕೆಲವು ಕಾರ್ಮಿಗಳು ಗಾಯಗೊಂಡಿದ್ದಾರೆ. ಇನ್ನು ಸಿಲಿಂಡರ್ ಸ್ಫೋಟ ಹೇಗೆ ಸಂಭವಿಸಿತು ಅನ್ನೋ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -