Friday, April 19, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಸಾವಿರ ಗಡಿ ದಾಟಿದ ಕೊರೋನಾ ಪ್ರಕರಣ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಸಾವಿರ ಗಡಿ ದಾಟಿದ ಕೊರೋನಾ ಪ್ರಕರಣ

spot_img
- Advertisement -
- Advertisement -

ಮಂಗಳೂರು: ಇಂದು ಜಿಲ್ಲೆಯಲ್ಲಿ ಹೊಸದಾಗಿ 228 ಕೊರೋನಾ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10137 ಕ್ಕೆ ಏರಿಕೆಯಾಗಿದೆ.

ಕೊರೋನಾ ಸೋಂಕಿನಿಂದಾಗಿ ಇಂದು 4 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 305ಕ್ಕೆ ಏರಿಕೆಯಾಗಿದೆ. ಇಂದು ಮೃತರಲ್ಲಿ ಮಂಗಳೂರಿನ ಇಬ್ಬರು, ಬಂಟ್ವಾಳದ ಒಬ್ಬರು ಹಾಗೂ ಇತರ ಜಿಲ್ಲೆಯ ಒಬ್ಬರು ಸೇರಿದ್ದಾರೆ.

ತಾಲೂಕುವಾರು ಸೋಂಕಿತರ ಸಂಖ್ಯೆ:
ಇಂದಿನ 228 ಸೋಂಕಿತರಲ್ಲಿ ಮಂಗಳೂರಿನ 150 ಮಂದಿ,
ಬಂಟ್ವಾಳದ 23 ಮಂದಿ,
ಪುತ್ತೂರಿನ 15 ಮಂದಿ,
ಸುಳ್ಯದ 8 ಮಂದಿ,
ಬೆಳ್ತಂಗಡಿಯ 7 ಮಂದಿ ಹಾಗೂ ಹೊರ ಜಿಲ್ಲೆಯ 25 ಮಂದಿ ಸೇರಿದ್ದಾರೆ.

ಇಂದು ಒಟ್ಟು 320 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ, ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 7513 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.

- Advertisement -
spot_img

Latest News

error: Content is protected !!