- Advertisement -
- Advertisement -
ಮಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟ ಆಗ್ರಹಿಸಿದೆ.
ಸಚಿವ ಸ್ಥಾನ ನೀಡುವಂತೆ ಒಕ್ಕೂಟದ ಅಧ್ಯಕ್ಷ ಮತ್ತು ಮಾಜಿ ಮೇಯರ್ ಕೆ. ಆಶ್ರಫ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಮತ್ತು 2024 ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕೆಂದು ದ.ಕ. ಜಿಲ್ಲಾ ಮುಸ್ಲಿಂ ಒಕ್ಕೂಟ ಕಾಂಗ್ರೆಸ್ ಹೈಕಮಾಂಡ್ ಅನ್ನು ಒತ್ತಾಯಿಸಿದೆ.
ಬಿ.ಕೆ. ಹರಿಪ್ರಸಾದ್ ಅವರಿಗೆ ಆರ್ಯ ಈಡಿಗ ಕೋಟಾದಡಿ ಸಚಿವ ಸ್ಥಾನ ನೀಡುವಂತೆಯೂ ಆರ್ಯ ಈಡಿಗ ಮಹಾ ಸಂಸ್ಥಾನದ ವಿಖ್ಯಾತಾನಂದ ಸ್ವಾಮೀಜಿ ಕೂಡಾ ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
- Advertisement -