Saturday, June 28, 2025
Homeಕರಾವಳಿಮಂಗಳೂರು : ನಿರಂತರ ಮಳೆಯಿಂದ ಮನೆಗಳಿಗೆ ಹಾನಿ; ಜನ ಜೀವನ ಅಸ್ಥವ್ಯಸ್ಥ!

ಮಂಗಳೂರು : ನಿರಂತರ ಮಳೆಯಿಂದ ಮನೆಗಳಿಗೆ ಹಾನಿ; ಜನ ಜೀವನ ಅಸ್ಥವ್ಯಸ್ಥ!

spot_img
- Advertisement -
- Advertisement -

ಮಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ಮಂಗಳೂರು ಸಹಿತ ಕರಾವಳಿಯಾದ್ಯಂತ ಬಿರುಸು ಪಡೆದ ಮಳೆಗೆ ನಗರದ ಬಹುತೇಕ ಕಡೆಗಳಲ್ಲಿ ಕೃತಕ ನೆರೆ ಆವರಿಸಿದ್ದು, ಕೆಲವು ಕಡೆಗಳಲ್ಲಿ ಹಾನಿ ಸಂಭವಿಸಿದೆ.

ಶನಿವಾರ ರಾತ್ರಿ ಆರಂಭಗೊಂಡ ಮಳೆ ರಾತ್ರಿಯೂ ನಿರಂತರವಾಗಿ ಸುರಿಯುತ್ತಿತ್ತು. ಭಾರೀ ಮಳೆಯ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡು, ಕೆಲವೊಂದು ಮನೆ, ಅಂಗಡಿಯೊಳಗೆ ನೀರು ನುಗ್ಗಿತ್ತು. ಕೊಟ್ಟಾರಚೌಕಿ ಬಳಿ ನೀರು ಹರಿಯುವ ಚರಂಡಿ ಅವ್ಯವಸ್ಥೆಯ ಪರಿಣಾಮ ಫ್ಲೈಓವರ್ ಕೆಳ ಭಾಗದಲ್ಲಿ ನೀರು ನಿಂತು ಸುತ್ತ ಮುತ್ತಲಿನ ಅಂಗಡಿಯೊಳಗೂ ವ್ಯಾಪಿಸಿತ್ತು. ರಾತ್ರಿ ವೇಳೆ ಅಂಗಡಿಯೊಳಗೆ ನೀರು ಆವರಿಸಿದ್ದು, ಅಂಗಡಿಯೊಳಗಿದ್ದ ವಸ್ತುಗಳಿಗೆ ಹಾನಿ ಉಂಟಾಗಿದೆ. ಭಾರೀ ಮಳೆ ಸುರಿದರೆ ಕಳೆದ ಅನೇಕ ವರ್ಷಗಳಿಂದ ಈ ಪ್ರದೇಶದಲ್ಲಿ ಕೃತಕ ನೆರೆ ಸೃಷ್ಟಿಯಾಗುತ್ತಿದ್ದು, ಸಮಸ್ಯೆಗೆ ಇನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುತ್ತಾರೆ ಸ್ಥಳೀಯರು.

ನಿರಂತರ ಮಳೆಯಿಂದಾಗಿ ನೀರುಮಾರ್ಗ ಬಳಿ ಮನೆಯೊಂದರ ಕಾಂಪೌಂಡ್‌ ಕುಸಿದಿದೆ. ಬಜಾಲ್‌ ಬಳಿ ಮನೆಯೊಂದಕ್ಕೆ ಹಾನಿ ಉಂಟಾಗಿದೆ. ಮನೆ ಮಂದಿಯನ್ನು ಸಂಬಂಧಿಕರ ಮನೆಗೆ ಕಳುಹಿಸಲಾಗಿದೆ. ಉರ್ವ ಹೊಗೆಬೈಲ್‌ ಬಳಿ ಮನೆಯೊಂದಕ್ಕೆ ನೀರು ನುಗ್ಗಿತ್ತು. ನೀರು ಮಾರ್ಗದ ಬಳಿ ಕೃಷಿ ಭೂಮಿಗೆ ಮಳೆಯ ನೀರು ತೋಡಿನ ಮೂಲಕ ಹರಿದು ಬಂದು ಅಪಾರ ಹಾನಿಯಾಗಿದೆ. ಬಂಗ್ರ ಕೂಳೂರಿನಲ್ಲಿ ಮಳೆಗೆ ಮನೆಯೊಂದು ಪೂರ್ಣವಾಗಿ ಹಾನಿಗೊಳಗಾಗಿದೆ. ಹಾಗೆಯೆ ಮಂಗಳೂರಿನ ಕೆಲವೊಂದು ಕಡೆ ರಸ್ತೆಗಳಲ್ಲಿ ಕೆಸರು, ಚರಂಡಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.

ಮಂಗಳೂರು ಗ್ರಾಮಾಂತರ, ಕಾಸರ ಗೋಡು ಜಿಲ್ಲೆಯ ವಿವಿಧೆಡೆ ಕೂಡ ಉತ್ತಮ ಮಳೆಯಾಗಿದೆ. ಆದರೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

- Advertisement -
spot_img

Latest News

error: Content is protected !!