- Advertisement -
- Advertisement -
ಮೈಸೂರು: ಸ್ಯಾಂಡಲ್ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೃಷಿ ಇಲಾಖೆಯ ರಾಯಭಾರಿಯಾಗುವುದಕ್ಕೆ ಒಪ್ಪಿಕೊಂಡಿದ್ದಾರೆ.
ಮೈಸೂರಿನ ದರ್ಶನ್ ಫಾರ್ಮ್ಹೌಸ್ನಲ್ಲಿಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ನಟ ದರ್ಶನ್ರನ್ನು ಭೇಟಿಯಾದ ಸಚಿವರು ತಾವು ಬಂದ ಉದ್ದೇಶವನ್ನು ತಿಳಿಸಿದ್ದಾರೆ. ಮರು ಮಾತನಾಡದೇ ದರ್ಶನ್ ಯಾವುದೇ ಸಂಭಾವನೆ ಪಡೆಯದೇ ರಾಯಭಾರಿಯಾಗಲು ದರ್ಶನ್ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾಹಿತಿ ನೀಡಿದ್ದು, ಮೈಸೂರಿನ ದರ್ಶನ್ ಫಾರ್ಮ್ ಹೌಸ್ ನಲ್ಲಿ ನಟ ದರ್ಶನ್ ಭೇಟಿಯಾಗಿದ್ದೆ. ಕೆಲವೊತ್ತು ಕೃಷಿ ಇಲಾಖೆಯ ರಾಯಭಾರಿಯಾಗುವಂತೆ ಮನವಿ ಮಾಡಲಾಯಿತು. ಇಂತಹ ಮನವಿಗೆ ಪ್ರತಿಸ್ಪಂದಿಸಿರುವ ನಟ ದರ್ಶನ್, ಯಾವುದೇ ಸಂಭಾವನೇ ಇಲ್ಲದೇ ರಾಯಭಾರಿಯಾಗಲು ದರ್ಶನ್ ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.
- Advertisement -