Wednesday, June 24, 2026
Homeಕರಾವಳಿಮಂಗಳೂರುದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ ಅಧಿಕಾರ ಸ್ವೀಕಾರ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್.ವಿ ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಮುಲೈ ಮುಹಿಲನ್ ಎಂ.ಪಿ. ಅವರು  ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. 2016 ಐಎಎಸ್ ಬ್ಯಾಚ್‌ನ ಅಧಿಕಾರಿಯಾಗಿರುವ ದರ್ಶನ್ ಎಚ್.ವಿ. ಅವರು ವಾಣಿಜ್ಯ ತೆರಿಗೆಗಳ ಇಲಾಖೆಯ ಬೆಂಗಳೂರಿನ ಸೇವಾ ವಿಶ್ಲೇಷಣೆ ವಿಭಾಗದ ಹೆಚ್ಚುವರಿ ಆಯುಕ್ತರಾಗಿದ್ದರು.

ಮುಲ್ಲೈ ಮುಹಿಲನ್ ಎಂಪಿ 2023 ಜೂನ್ 17 ರಂದು ದ.ಕ. ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಇದೀಗ 2 ವರ್ಷ ಪುರ್ಣಗೊಳಿಸಿರುವ ಬೆನ್ನಲ್ಲೇ ಅವರಿಗೆ ವರ್ಗಾವಣೆಯಾಗಿದೆ.

- Advertisement -

Latest News

error: Content is protected !!