- Advertisement -
- Advertisement -
ಬೆಂಗಳೂರು: ಹೊಸಪೇಟೆಯಲ್ಲಿ ದರ್ಶನ್ ಮೇಲೆ ಚಪ್ಪಲಿ ಎಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಯಾಂಡಲ್ ವುಡ್ ನ ಬಹುಕೇತ ಸೆಲೆಬ್ರೆಟಿಗಳು ದರ್ಶನ್ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ. ಇದೆಲ್ಲದಕ್ಕಿಂತ ಮುಖ್ಯವಾಗಿ ನಟ ಕಿಚ್ಚ ಸುದೀಪ್ ದರ್ಶನ್ ಪರವಾಗಿ ಮಾತನಾಡಿದ್ದು ಅಭಿಮಾನಿಗಳಿಗೆ ತುಂಬಾನೇ ಖುಷಿ ಕೊಟ್ಟಿತ್ತು.
ಸುದೀರ್ಘ ಪತ್ರದ ಮೂಲಕ ಕಿಚ್ಚ ಸುದೀಪ್ ಅವರು ದರ್ಶನ್ ಅವರನ್ನು ಬೆಂಬಲಿಸಿದ್ದರು. ಇದೀಗ 5 ವರ್ಷಗಳ ಬಳಿಕ ದರ್ಶನ್ ಕಿಚ್ಚ ಸುದೀಪ್ ಅವರ ಮಾತಿಗೆ ಸ್ಪಂದಿಸಿದ್ದಾರೆ. ’ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು’ ಎಂದು ದರ್ಶನ್ ಹೇಳಿದ್ದಾರೆ. ದರ್ಶನ್ ಪ್ರತಿಕ್ರಿಯೆ ಕಿಚ್ಚ ಹಾಗೂ ದರ್ಶನ್ ಇಬ್ಬರ ಅಭಿಮಾನಿಗಳಿಗೂ ಖುಷಿ ತಂದಿದೆ. ಹಳೆ ಸ್ನೇಹ ಹೀಗೇ ಮುಂದುವರಿಯಲಿ ಎಂದು ಹಾರೈಸಿದ್ದಾರೆ.
- Advertisement -