- Advertisement -
- Advertisement -
ಬೆಂಗಳೂರು; ತನ್ನ ಅಭಿಮಾನಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಡಿ ಬಾಸ್ ದರ್ಶನ್ ಸೇರಿ ಒಟ್ಟು 13 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪೊಲೀಸರ ವಶದಲ್ಲಿರುವ ದರ್ಶನ್ ಅವರನ್ನು ಅವರ ಪತ್ನಿಯ ಸಹೋದರ ಸುಶಾಂತ್ ಭೇಟಿಯಾಗಿದ್ದಾರೆ. ಭೇಟಿಯ ವೇಳೆ ದರ್ಶನ್ ಅವರ ಫೋನ್ ಮೂಲಕ ತಮ್ಮ ಪತ್ನಿ ವಿಜಯಲಕ್ಷ್ಮೀ ಹಾಗೂ ಪುತ್ರ ವಿನೀತ್ ಜೊತೆ ಮಾತನಾಡಿದ್ದಾರೆ.
ಈ ವೇಳೆ ನಾನೇನು ಮಾಡಿಲ್ಲ, ನನಗೂ ಈ ಕೊಲೆಗೂ ಸಂಬಂಧವಿಲ್ಲ ಎಂದು ಪತ್ನಿ ಹಾಗೂ ಪುತ್ರನಿಗೆ ಹೇಳಿದ್ದಾರೆ ಎನ್ನಲಾಗಿದೆ. ಇನ್ನು ತಮ್ಮ ವಕೀಲ ಅನಿಲ್ ಅವರ ಮುಂದೆಯೂ ದರ್ಶನ್ ಅವರು ಇದೇ ರೀತಿಯ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
- Advertisement -