Monday, June 30, 2025
Homeಕರಾವಳಿಬೆಳ್ತಂಗಡಿ: ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

ಬೆಳ್ತಂಗಡಿ: ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

spot_img
- Advertisement -
- Advertisement -

ಬೆಳ್ತಂಗಡಿ; ದಿನಾಂಕ:12.10.2024ರಂದು ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲಿನಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ ಆಶ್ರಮನಿವಾಸಿಗಳೊಂದಿಗೆ ಆಚರಿಸಲಾಯಿತು.

ಸಭಾಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯ ಡಾ.ಯು.ಸಿ.ಪೌಲೋಸ್ರವರು  ಎಲ್ಲರಿಗೂ ಶುಭಹಾರೈಸುತ್ತಾ ಮಾತನಾಡಿ, ದಸರಾ ಹಬ್ಬವನ್ನು ಯಾವುದೇ ಜಾತಿ-ಮತ, ಭೇದ-ಭಾವವಿಲ್ಲದೆ ಎಲ್ಲರೂ ಒಟ್ಟಾಗಿ ಆಚರಿಸಿ, ಸಂತೋಷವನ್ನು ಹಂಚಿಕೊಳ್ಳುವ ನಾಡಹಬ್ಬವಾಗಿದೆ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಪ್ರಾಮುಖ್ಯತೆಯನ್ನು ಹೊಂದಿರುವ ಬಹುಮುಖಿ ಹಬ್ಬವಾಗಿದೆ ಎಂದರು.

ಅತಿಥಿಗಳಾಗಿ ಆಗಮಿಸಿದ್ದ ವೈದ್ಯರಾದ ಶ್ರೀಯುತ ಡಾ. ಶಿವಾನಂದ ಸ್ವಾಮಿಯವರು ಮಾತನಾಡಿ  ನವರಾತ್ರಿಯಲ್ಲಿ ನವದುರ್ಗೆಯರನ್ನು ಆರಾಧಿಸುವ ರೀತಿ ಮತ್ತು ಮಹತ್ವದ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ಸಂಸ್ಥೆಯ ಟ್ರಸ್ಟಿ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು, ಆಶ್ರಮನಿವಾಸಿಗಳಾದ ಶ್ರೀಯುತ ರವಿ ಮತ್ತು ಸರಸ್ವತಿಪ್ರಿಯರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭಾಕಾರ್ಯಕ್ರಮದ ನಂತರ ಆಶ್ರಮನಿವಾಸಿಗಳಿಂದ ಮತ್ತು ಸಿಬ್ಬಂದಿವರ್ಗದವರಿಂದ ವಿವಿಭ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ದಸರಾ ಹಬ್ಬದ ಪ್ರಯುಕ್ತ ಆಶ್ರಮನಿವಾಸಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಂಸ್ಥೆಯ ಆಡಳಿತ ಮಂಡಳಿಯವರು, ಸಿಬ್ಬಂದಿವರ್ಗದವರು, ಆಶ್ರಮನಿವಾಸಿಗಳೆಲ್ಲರೂ ಉಪಸ್ಥಿತರಿದ್ದರು. ಸಂಸ್ಥೆಯ ಸಿಬ್ಬಂದಿಯವರಾದ ಶ್ರೀಮತಿ ದಿನವತಿಯವರು ಕಾರ್ಯಕ್ರಮ ನಿರೂಪಿಸಿದರು.

- Advertisement -
spot_img

Latest News

error: Content is protected !!