Saturday, May 18, 2024
Homeತಾಜಾ ಸುದ್ದಿಆರ್ಎಸ್ಎಸ್ ನೂತನ ಸರಕಾರ್ಯವಾಹ ಆಗಿ ದತ್ತಾತ್ರೇಯ ಹೊಸಬಾಳೆ ಆಯ್ಕೆ

ಆರ್ಎಸ್ಎಸ್ ನೂತನ ಸರಕಾರ್ಯವಾಹ ಆಗಿ ದತ್ತಾತ್ರೇಯ ಹೊಸಬಾಳೆ ಆಯ್ಕೆ

spot_img
- Advertisement -
- Advertisement -

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಎರಡನೇ ಅತ್ಯುನ್ನತ ಹುದ್ದೆ ಸರ ಕಾರ್ಯವಾಹ ಆಗಿ ಕರ್ನಾಟಕದವರಾದ ದತ್ತಾತ್ರೇಯ ಹೊಸಬಾಳೆ ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಹೊರವಲದ ಚೆನ್ನೇನಹಳ್ಳಿ ಜನ ಸೇವಾ ವಿದ್ಯಾಕೇಂದ್ರದಲ್ಲಿ ನಡೆಯುತ್ತಿರುವ ಅಖಿಲ ಭಾರತೀಯ ಪ್ರತಿನಿಧಿ ಸಭಾ (ಎಬಿಪಿಎಸ್) ಅಧಿವೇಶನದಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ ಎಂದು ಆರೆಸ್ಸೆಸ್ ತಿಳಿಸಿದೆ.

ಆರೆಸ್ಸೆಸ್ ನಲ್ಲಿ ಸರಸಂಘಚಾಲಕ ಮತ್ತು ಸರಕಾರ್ಯವಾಹ ಅತ್ಯುನ್ನತ ಹುದ್ದೆ. ಡಾ. ಮೋಹನ್ ಭಾಗವತ್ ಅವರು ಸರಸಂಘಚಾಲಕರಾಗಿದ್ದಾರೆ. ಭೈಯಾಜಿ ಜೋಶಿಯವರು 2009ರಿಂದ ಸರಕಾರ್ಯವಾಹರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಶನಿವಾರ ಎಬಿಪಿಎಸ್ ನಲ್ಲಿ ನಡೆದ ಆಂತರಿಕ ಚುನಾವಣೆಯಲ್ಲಿ ಕರ್ನಾಟಕದ ಹೊಸಬಾಳೆಯವರಿಗೆ ಸರಕಾರ್ಯವಾಹ ಹೊಣೆ ಲಭಿಸಿದೆ.

ಕರ್ನಾಟಕದಿಂದ ಹೋ.ವೇ.ಶೇಷಾದ್ರಿ ಅವರು ಸರಕಾರ್ಯವಾಹರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದರು. ಈಗ ಕನ್ನಡಿಗರಾದ ದತ್ತಾತ್ರೇಯ ಹೊಸಬಾಳೆಯವರು ಇದೇ ಹುದ್ದೆಗೆ ನೇಮಕಗೊಂಡಿದ್ದಾರೆ.

- Advertisement -
spot_img

Latest News

error: Content is protected !!