- Advertisement -
- Advertisement -
ಸುಳ್ಯ: ಇಲ್ಲಿನ ಕಲ್ಲುಗುಂಡಿ ಬಳಿ ರಬ್ಬರ್ ತೋಟದಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಮಂಗಳೂರು ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲುಗುಂಡಿ ಸಮೀಪದ ರಬ್ಬರ್ ತೋಟದಲ್ಲಿ ಯುವಕನ ಶವ ಪತ್ತೆಯಾಗಿದೆ,
ಇನ್ನು ಮೃತ ವ್ಯಕ್ತಿಯನ್ನು ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ರಾಮಣ್ಣ ನಾಯ್ಕ ಹಾಗೂ ನೀಲಮ್ಮ ದಂಪತಿ ಪುತ್ರ ಗಣೇಶ ಎಂದು ಗರುತಿಸಲಾಗಿದೆ. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಕಂಡು ಬಂದಿದೆ.
ಇಂದು ಬೆಳಗ್ಗೆ ಯುವಕನ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
- Advertisement -