- Advertisement -
- Advertisement -
ವಿಟ್ಲ: ಕೊಳೆತ ಸ್ಥಿತಿಯಲ್ಲಿ ಗಂಡಸಿನ ಮೃತದೇಹ ಪತ್ತೆಯಾಗಿರುವ ಘಟನೆ ವಿಟ್ಲ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಎಂಬಲ್ಲಿ ನಡೆದಿದೆ.
ಸ್ಥಳೀಯರು ಗುಡ್ಡಕ್ಕೆ ಸೊಪ್ಪು ಸೌದೆ ತರಲು ಹೋದಾಗ ಮೊಬೈಲ್ ಒಂದು ಪತ್ತೆಯಾಗಿದೆ. ಇದೇ ವೇಳೆ ಅಕ್ಕಪಕ್ಕದ ನೋಡಿದಾಗ ಮೃತದೇಹ ಪತ್ತೆಯಾಗಿದ್ದು, ಭಯಗೊಂಡು ಓಡಿಹೋಗಿದ್ದಾರೆನ್ನಲಾಗಿದೆ. ಬಳಿಕ ನೋಡಿದಾಗ ಪಕ್ಕದಲ್ಲಿರುವ ಮರದಲ್ಲಿ ಹಗ್ಗವೊಂದು ನೇತಾಡುತ್ತಿದ್ದು, ಮೃತದೇಹ ನೆಲದಲ್ಲಿ ಬಿದ್ದುಕೊಂಡಿದ್ದು, ಕೊಳೆತು ಅಸ್ಥಿಪಂಜರ ಮಾತ್ರ ಕಾಣುತ್ತಿದ್ದು ಸತ್ತು ಹಲವು ಸಮಯ ಕಳೆದಿದೆ ಎನ್ನಲಾಗಿದೆ.
- Advertisement -