- Advertisement -
- Advertisement -
ಸುಳ್ಯ: ಇಲ್ಲಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿ ಮಧ್ಯವಯಸ್ಕ ವ್ಯಕ್ತಿಯೊಬ್ಬರ ಮೃತದೇಹ ಕತ್ತು ಕೊಯ್ಯಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ನಿನ್ನೆ ರಾತ್ರಿ 9.15 ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ.
ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಶೌಚಾಲಯದ ಹಿಂಬದಿ ಬಿದ್ದಿರುವುದನ್ನು ಕಂಡ ಟಿ.ಸಿ.ಯವರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ಮೃತದೇಹದ ಬಳಿ ಇದ್ದ ಬ್ಯಾಗ್ ಪರಿಶೀಲಿಸಿದಾಗ ಅಲ್ಲಿದ್ದ ಆಧಾರ್ ಕಾರ್ಡ್ ನ ಆಧಾರದಲ್ಲಿ ಆ ವ್ಯಕ್ತಿ ಮಂಗಳೂರಿನ ಅಚ್ಚುತ ಎಂಬವರೆಂದು ತಿಳಿದುಬಂದಿದೆ.
ಪೊಲೀಸರು ಮೃತದೇಹವನ್ನು ಕೆ.ವಿ.ಜಿ.ಆಸ್ಪತ್ರೆಗೆ ಕೊಂಡೊಯ್ದು ಶೈತ್ಯಾಗಾರದಲ್ಲಿ ಇರಿಸಿದ್ದಾರೆ.
ವ್ಯಕ್ತಿಯ ಸಾವು ಹೇಗೆ ಸಂಭವಿಸಿತೆಂಬುದು ಇನ್ನೂ ಖಚಿತ ಪಟ್ಟಿಲ್ಲ. ಇದು ಕೊಲೆಯೇ , ಆತ್ಮಹತ್ಯೆಯೇ ಎಂಬುದು ಪೊಲೀಸ್ ತನಿಖೆಯ ಬಳಿಕ ತಿಳಿದುಬರಬೇಕಾಗಿದೆ.
- Advertisement -