- Advertisement -
- Advertisement -
ಮಣಿಪಾಲ: ಮಣ್ಣಪಳ್ಳ ಕೆರೆಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಗಾಳ ಹಾಕುತ್ತಿದ್ದ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.
ಮಣಿಪಾಲ ಠಾಣಾಧಿಕಾರಿ ರಾಜಶೇಖರ ಹೊಂದಾಳೆ, ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ್ ಘಟನಾ ಸ್ಥಳದಲ್ಲಿದ್ದು, ಕಾನೂನು ಪ್ರಕ್ರಿಯೆ ನಡೆಸಿದ್ರು.
ಮೃತ ವ್ಯಕ್ತಿಯ ಸ್ಪಷ್ಟ ವಿಳಾಸ ತಿಳಿದುಬಂದಿಲ್ಲ. ಕುಂದಾಪುರದ ಪ್ರಕಾಶ್ (35) ಎಂದು ಹೇಳಲಾಗಿದೆ. ಸಂಬಂಧಿಕರು ಮಣಿಪಾಲ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ಸೂಚಿಸಲಾಗಿದೆ.
- Advertisement -