Wednesday, May 1, 2024
Homeಕರಾವಳಿಉಡುಪಿಉಡುಪಿ: ನಟ ಚೇತನ್‌ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧಾರ

ಉಡುಪಿ: ನಟ ಚೇತನ್‌ ವಿರುದ್ಧ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧಾರ

spot_img
- Advertisement -
- Advertisement -

ಉಡುಪಿ: ಭೂತಕೋಲ ಬಗ್ಗೆ ನಟ ಚೇತನ್‌ ನೀಡಿರುವ ಹೇಳಿಕೆ ವಿರುದ್ಧ ಕರಾವಳಿ ಜನ ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಭೂತಾರಾಧನೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಉಡುಪಿಯಲ್ಲಿ ನಟ ಚೇತನ್ ವಿರುದ್ಧ ಇದೀಗ ಪಂಜುರ್ಲಿ ದೈವಕ್ಕೆ ದೂರು ನೀಡಲು ನಿರ್ಧರಿಸಲಾಗಿದೆ.

ಈ ಬಗ್ಗೆ ಉಡುಪಿಯಲ್ಲಿ ಹಿರಿಯ ದೈವರಾಧಕ ಕುಮಾರ ಪಂಪದ ಮಾತನಾಡಿ, ಸಂಸ್ಕೃತಿಯ ಅವಹೇಳನ ಆದಾಗೆಲ್ಲ ನಾವು ದೈವದ ಮುಂದೆ ಪ್ರಾರ್ಥನೆ ಮಾಡುತ್ತೇವೆ. ನಾವು ಸೇವೆ ಕೊಡುವ ದೈವಗಳ ಮುಂದೆಯೇ ನಾವು ಪ್ರಾರ್ಥನೆ ಮಾಡುತ್ತೇವೆ. ನಮ್ಮ ಮೂಲ ಆರಾಧನೆಯ ಪಂಜುರ್ಲಿ ದೈವದ ಮುಂದೆ ಈ ಬಗ್ಗೆ ಪ್ರಾರ್ಥನೆ ಸಲ್ಲಿಸುತ್ತೇವೆ ಎಂದರು. ಹಾಗೆಯೇ ಕರಾವಳಿಯಾದ್ಯಂತ ಪರವ, ಪಂಪದ ನಲಿಕೆಯವರು ಜೀವಿಸುತ್ತಿದ್ದೇವೆ. ನಾವು ಅಲೆಮಾರಿಗಳು ಎಂಬ ಮಾತನ್ನು ಒಪ್ಪಲು ಸಾಧ್ಯವಿಲ್ಲ. ನಾವು ನಂಬಿಕೊಂಡ ಸತ್ಯದ ಮೂಲಕ ಚೇತನ್ ಗೆ ಪ್ರತಿಕ್ರಿಯೆ ಕೊಡುತ್ತೇವೆ ಎಂದು ಹೇಳಿದರು.

- Advertisement -
spot_img

Latest News

error: Content is protected !!