- Advertisement -
- Advertisement -
ಉಡುಪಿ: ಸಚಿವ ಉಮೇಶ ಕತ್ತಿಯವರ ನಿಧನಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗಷ್ಟೇ ಉಡುಪಿಗೆ ಭೇಟಿ ಕೊಟ್ಟಿದ್ದ ಸಚಿವ ಉಮೇಶ್ ಕತ್ತಿಯವರು ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸ್ಮಾರಕ ಸ್ಮೃತಿ ವನಕ್ಕೆ ಶಿಲಾನ್ಯಾಸ ನೆರವೇರಿಸಿದ್ರು. ಅತೀ ಶೀಘ್ರದಲ್ಲಿ ಈ ಕಾರ್ಯ ಮುಗಿದು ಉದ್ಘಾಟನೆಗೂ ಆಗಮಿಸುವುದಾಗಿ ತಿಳಿಸಿದ್ದರು. ಆದರೆ ಈಗ ಅವರ ನಿಧನ ತೀವ್ರ ನೋವು ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶ್ರೀಗಳು ತಿಳಿಸಿದ್ದಾರೆ.
- Advertisement -